National

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ; ಅರ್ಧಗಂಟೆಯಲ್ಲೇ 6.4 ಸೆಂಟಿಮೀಟರ್‌ ಸುರಿದ ಮಳೆ

ಮಂಗಳೂರು; ದಕ್ಷಿಣಕನ್ನಡ ಜಿಲ್ಲೆ ಮಂಗಳೂರು ಸುತ್ತಮುತ್ತ ಭರ್ಜರಿ ಮಳೆಯಾಗಿದೆ. ಅರ್ಧ ಗಂಟೆಯಲ್ಲಿ ಭಾರೀ ಮಳೆ ಸುರಿದಿದ್ದು, ಪಾವೂರಲ್ಲಿ ಅರ್ಧಗಂಟೆಯಲ್ಲಿ 6.4 ಸೆಂಟಿ ಮೀಟರ್‌ ಮಳೆಯಾಗಿದೆ. ಇಂದು ಬೆಳಗ್ಗೆ 8.30 ರಿಂದ 9 ಗಂಟೆ ಅವಧಿಯಲ್ಲಿ ಭರ್ಜರಿ ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ.

ಪಡೀಲ್ ರೈಲ್ವೆ ಕೆಳಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಲ್ಕೈದು ಅಡಿ ನೀರು ನಿಂತಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.

Share Post