National

ನಾನು ಜೀವಂತವಾಗಿ ವಾಪಸ್‌ ಬಂದಿದ್ದಕ್ಕೆ ನಿಮ್ಮ ಸಿಎಂಗೆ ಧನ್ಯವಾದ; ಪ್ರಧಾನಿ ಮೋದಿ

ಫಿರೋಜ್​ಪುರ್: ನಾನು ಜೀವಂತವಾಗಿ ವಿಮಾನ ನಿಲ್ದಾಣಕ್ಕೆ ಬಂದಿರುವುದಕ್ಕೆ ನಿಮ್ಮ ಸಿಎಂಗೆ ಧನ್ಯವಾದ ತಿಳಿಸಿದ್ದೇನೆಂದು ಹೇಳಿ ಎಂದು ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಫಿರೋಜ್‌ಪುರಕ್ಕೆ ತೆರಳುತ್ತಿದ್ದ ವೇಳೆ ಭದ್ರತಾ ಲೋಪವುಂಟಾಗಿತ್ತು. ಫ್ಲೈಓವರ್‌ ಮೇಲೆ ಪ್ರಧಾನಿ ಕಾರಿಗೆ ಅಡ್ಡ ಬಂದ ಕೆಲವರು ಪ್ರತಿಭಟನೆ ನಡೆಸಿದ್ದರು. ಇದರಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅಲ್ಲಿಂದ ವಿಮಾನ ನಿಲ್ದಾಣಕ್ಕೆ ವಾಪಸ್ಸಾದರು.

  ಅನಂತರ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ನಾನು ಜೀವಂತವಾಗಿ ವಾಪಸ್‌ ಬಂದಿದ್ದಕ್ಕೆ ನಿಮ್ಮ ಸಿಎಂಗೆ ಧನ್ಯವಾದ ತಿಳಿಸಿ ಎಂದು ಪಂಜಾಬ್‌ ಸಿಎಂ ಬಗ್ಗೆ ಲೇವಡಿ ಮಾಡುವ ರೀತಿಯಲ್ಲಿ ಮಾತನಾಡಿದ್ದಾರೆ.

Share Post