National

ಭದ್ರತಾ ವೈಫಲ್ಯಕ್ಕೆ ರಾಷ್ಟ್ರಪತಿ ಕಳವಳ; ಶೀಘ್ರದಲ್ಲೇ ಕೋವಿಂದ್‌ ಭೇಟಿಯಾಗಲಿರುವ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ  ಮೋದಿಯವರು ಪಂಜಾಬ್‌ ಭೇಟಿ ವೇಳೆ ನಡೆದ ಭದ್ರತಾ ವೈಫಲ್ಯಕ್ಕೆ ರಾಷ್ಟ್ರಪತಿ ರಾಮಾನಾಥ ಕೋವಿಂದ್‌ ಅವರು ಕಳವಳ ವ್ಯಕ್ತಪಡಿಸಿದ್ದಾರೆ.  ಪಂಜಾಬ್‌ನಲ್ಲಿ ಈ ರೀತಿ ನಡೆಯಬಾರದಿತ್ತು ಎಂದು ರಾಷ್ಟ್ರಪತಿ ರಮಾನಾಥ ಕೋವಿಂದ್‌ ಹೇಳಿದ್ದಾರೆ.

ಇನ್ನು ಘಟನೆ ಬಗ್ಗೆ ವಿವರಿಸಲು ರಾಷ್ಟ್ರಪತಿ ರಮಾನಾಥ ಕೋವಿಂದ್‌ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಶೀಘ್ರದಲ್ಲೇ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿಗೆ ನಿನ್ನೆ ನಡೆದ ಘಟನೆ ಮಾಹಿತಿ ನೀಡಲಿದ್ಧಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

Share Post