National

ರಾಜ್ಯಸಭೆಗೆ ಕ್ರಿಕೆಟಿಗ ಹರ್ಭಜನ್‌ ಸಿಂಗ್‌ ಸ್ಪರ್ಧೆ; ಎಎಪಿಯಿಂದ ಭಜ್ಜಿಗೆ ಟಿಕೆಟ್‌

ನವದೆಹಲಿ: ಕ್ರಿಕೆಟಿಗ ಹರ್ಭಜನ್‌ ಸಿಂಗ್‌ ಅವರಿಗೆ ಎಎಪಿ ಪಕ್ಷ ರಾಜ್ಯಸಭಾ ಟಿಕೆಟ್‌ ಘೋಷಣೆ ಮಾಡಿದೆ. ಇದರ ಜೊತೆಗೆ ಇನ್ನೂ ನಾಲ್ವರಿಗೆ ಎಎಪಿ ಟಿಕೆಟ್‌ ನೀಡಿದೆ. ಮಾರ್ಚ್‌ 31 ರಂದು ಚುನಾವಣೆ ನಡೆಯಲಿದ್ದು, ಎಎಪಿಯಿಂದ ಕ್ರಿಕೆಟಿಗ ಹರ್ಭಜನ್‌ ಸಿಂಗ್‌, ದೆಹಲಿ ಶಾಸಕ ರಾಘವ್‌ ಛಡ್ಡಾ, ಐಐಟಿ ದೆಹಲಿ ಪ್ರೊಫೆಸರ್‌ ಡಾ.ಸಂದೀಪ್‌ ಪಾಠಕ್‌, ಲವ್ಲಿ ಪ್ರೊಫೆಷನಲ್‌ ಯೂನಿವರ್ಸಿಟಿ ಕುಲಪತಿ ಅಶೋಕ್‌ ಮಿತ್ತಲ್‌ ಹಾಗೂ ಪಂಜಾಬ್‌ನ ಉದ್ಯಮಿ ಸಂಜೀವ್‌ ಅರೋರಾ ಅವರನ್ನು ಎಎಪಿ ತನ್ನ ಅಭ್ಯರ್ಥಿಗಳಾಗಿ ಆಯ್ಕೆ ಮಾಡಿದೆ.

ಇಂದು ಎಎಪಿಯ ಎಲ್ಲಾ ಐದೂ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ರಾಜ್ಯಸಭೆಯ ಒಟ್ಟು 13 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಪಂಜಾಬ್‌ನ ಶಾಸಕರು ಐವರು ಸಂಸದರ ಆಯ್ಕೆಗೆ ಮತದಾನ ಮಾಡಲಿದ್ದಾರೆ. ಕೇರಳದಿಂದ ಮೂವರು, ಅಸ್ಸಾಂನಿಂದ ಇಬ್ಬರು, ಹಿಮಾಚಲ ಪ್ರದೇಶ, ನಾಗಾಲ್ಯಾಂಡ್‌ ಹಾಗೂ ತ್ರಿಪುರಾದಿಂದ ತಲಾ ಒಬ್ಬ ಸಂಸದರ ಆಯ್ಕೆ ನಡೆಯಲಿದೆ.

Share Post