NationalPolitics

India News ವರದಿಗಾರನ ಜೊತೆ ರಾಹುಲ್‌ ಗಾಂಧಿ ಅನುಚಿತ ವರ್ತನೆ!

ರಾಯ್‌ಬರೇಲಿ (ಉತ್ತರ ಪ್ರದೇಶ); ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರು ITV NETWORKನ ಇಂಡಿಯಾ ನ್ಯೂಸ್‌ ವರದಿಗಾರನ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ. ಇದೇ ವೇಳೆ ಕಾಂಗ್ರೆಸ್‌ ಕಾರ್ಯಕರ್ತರು, ವರದಿಗಾರ ಮೇಲೆ ಹಲ್ಲೆ ಕೂಡಾ ನಡೆಸಿದ್ದಾರೆ. ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ಈ ಕೃತ್ಯ ಎಸಗಲಾಗಿದೆ.

ಲೋಕಸಭೆ ಚುನಾವಣೆ ಗೂ ಮುನ್ನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯ ಯಾತ್ರೆ ಮಾಡುತ್ತಿದ್ದಾರೆ. ಇಂದು (ಮಂಗಳವಾರ) ಅವರ ಪ್ರಯಾಣ ಉತ್ತರ ಪ್ರದೇಶದ ರಾಯ್ ಬರೇಲಿ ತಲುಪಿದೆ. ಅಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಈ ವೇಳೆ ಇಂಡಿಯಾ ನ್ಯೂಸ್ ವರದಿಗಾರ ರಾಹುಲ್‌ ಗಾಂಧಿಯವರನ್ನು ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ರಾಹುಲ್‌ ಗಾಂಧಿ ವರದಿಗಾರನ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ. ಇಂಡಿಯಾ ನ್ಯೂಸ್‌ ವರದಿಗಾರ ಪ್ರಶ್ನೆ ಕೇಳುತ್ತಿದ್ದಂತೆ, ರಾಹುಲ್‌ ಗಾಂಧಿ ಕಿರುಚಲು ಶುರು ಮಾಡಿದ್ದಾರೆ.

ಈ ದೃಶ್ಯಗಳೆಲ್ಲಾ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋದಲ್ಲಿ ರಾಹುಲ್‌ ಗಾಂಧಿಯವರು  ಪತ್ರಕರ್ತನ ಹೆಸರಿನ ಮೂಲಕ ಅವರ ಜಾತಿಯ ಬಗ್ಗೆ ಕೇಳುತ್ತಿರುವುದು ಸ್ಪಷ್ಟವಾಗಿ ಕಂಡು ಬರುತ್ತಿದೆ. ಬಳಿಕ ಅಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ಪತ್ರಕರ್ತನ ಮೇಲೆ ಕೈ ಮಾಡಿದ್ದಾರೆ. ಇದೇ ವೇಳೆ ವಿಡಿಯೋದಲ್ಲಿ ರಾಹುಲ್ ಗಾಂಧಿ ಹೊಡೆಯಬೇಡಿ, ಹೊಡೆಯಬೇಡಿ ಎಂದು ಹೇಳುತ್ತಿರುವುದು ಕೇಳಿಬರುತ್ತಿದೆ. ರಾಹುಲ್ ಗಾಂಧಿ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಹಲವು ಬಾರಿ ಪತ್ರಕರ್ತರನ್ನು ಅವಮಾನಿಸಿದ್ದಾರೆ.

Share Post