National

ಹೆಲಿಕಾಪ್ಟರ್‌ ದುರಂತ: ಲೋಕಸಭೆಯಲ್ಲಿ ರಾಜನಾಥ್‌ ಸಿಂಗ್‌ ಮಾಹಿತಿ

ಲೋಕಸಭೆ: ತಮಿಳುನಾಡಿನ ಕೂನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್‌ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಲೋಕಸಭೆಗೆ ಮಾಹಿತಿ ನೀಡಿದರು.

ನಿನ್ನೆ ಬೆಳಗ್ಗೆ 11 ಗಂಟೆ 48 ನಿಮಿಷಕ್ಕೆ ಹೆಲಿಕಾಪ್ಟರ್‌ ಪತನವಾಗಿದೆ. ಹೆಲಿಕಾಪ್ಟರ್‌ ಪತನವಾಗಿದ್ದನ್ನು ಮೊದಲು ಸ್ಥಳೀಯರು ನೋಡುತ್ತಾರೆ. ಅವರೇ ರಕ್ಷಣೆಗೆ ಧಾವಿಸುತ್ತಾರೆ. ಅನಂತರ ರಕ್ಷಣಾ ಸಿಬ್ಬಂದಿ ಆಗಮಿಸುತ್ತಾರೆ. ಹೆಲಿಕಾಪ್ಟರ್‌ನಲ್ಲಿ 14 ಮಂದಿ ಇದ್ದರು, ಇದರಲ್ಲಿ 13 ಮಂದಿ ಮೃತಪಟ್ಟಿದ್ದಾರೆ ಎಂದು ರಾಜನಾಥ್‌ ಸಿಂಗ್‌ ಮಾಹಿತಿ ನೀಡಿದರು.

ಇನ್ನು ಘಟನೆಯಲ್ಲಿ ಹೆಲಿಕಾಪ್ಟರ್‌ನಲ್ಲಿದ್ದ ವರುಣ್‌ ಸಿಂಗ್‌ ಅವರಿಗೆ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರಿಗೆ ವೆಲ್ಲಿಂಗ್ಟನ್‌ನ ಸೇನಾ ಆಸ್ಪತೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜೀವ ರಕ್ಷಕಗಳನ್ನು ಬಳಸಿಕೊಂಡು ವರುಣ್‌ ಸಿಂಗ್‌ಗೆ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರವಾಗಿ ಗಾಯಗೊಂಡಿರುವ ಅವರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ ಎಂದು ರಾಜನಾಥ್‌ ಸಿಂಗ್‌ ಹೇಳಿದರು.

ಇನ್ನು ಇದೇ ವೇಳೆ ಸದನದಲ್ಲಿ ಮೌನಾಚರಣೆ ಮಾಡುವ ಮೂಲಕ ಮೃತ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

Share Post