National

ಎಎಪಿ ಸೇರ್ಪಡೆಯಾದ ಭಾಸ್ಕರ್‌ ರಾವ್‌; ಪಕ್ಷಕ್ಕೆ ಬರಮಾಡಿಕೊಂಡ ಕೇಜ್ರಿವಾಲ್‌

ನವದೆಹಲಿ: ನಿವೃತ್ತ ಐಪಿಎಸ್‌ ಅಧಿಕಾರಿ ಬಿ.ಭಾಸ್ಕರ್‌ ರಾವ್‌ ಅವರು ಅಧಿಕೃತವಾಗಿ ಇಂದು ಆಮ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ದೆಹಲಿ ಎಎಪಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ಅವರು ಭಾಸ್ಕರ್‌ ರಾವ್‌ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಐಪಿಎಸ್‌ ಅಧಿಕಾರಿಯಾಗಿದ್ದ ಭಾಸ್ಕರ್ ರಾವ್ ಅವರು ಕೆಲ ತಿಂಗಳ ಹಿಂದೆ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ ವಾರದ ಹಿಂದೆ ಅದು ಅಂಗೀಕಾರವಾಗಿತ್ತು. ಇದಾದ ನಂತರ ಅವರು ರಾಜಕೀಯ ಪ್ರವೇಶ ನಿರ್ಧಾರ ತೆಗೆದುಕೊಂಡಿದ್ದರು. ಎಎಪಿ ನಾಯಕರ ಜೊತೆ ಈ ಬಗ್ಗೆ ಚರ್ಚೆ ನಡೆಸಿದ್ದರು. ಇಂದು ಕೊನೆಗೂ ಅವರು ಎಎಪಿಗೆ ಸೇರ್ಪಡೆಯಾಗಿದಾರೆ. ಈ ಸಂದರ್ಭದಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಮನೀಷ್‌ ಸಿಸೋಡಿಯಾ ಕೂಡಾ ಹಾಜರಿದ್ದರು.

Share Post