National

ತಮಿಳುನಾಡು ಅಸೆಂಬ್ಲಿಯಲ್ಲಿ ಪುನೀತ್‌ಗೆ ಗೌರವ

ಚೆನ್ನೈ: ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ನಿಧನಕ್ಕೆ ತಮಿಳುನಾಡು ಸರ್ಕಾರ ನಮನ ಸಲ್ಲಿಸಿದೆ. ತಮಿಳುನಾಡಿನಲ್ಲಿ ನಿನ್ನೆಯಿಂದ ಮೂರು ದಿನಗಳ ಚಳಿಗಾಲ ಅಧಿವೇಶನ ಶುರುವಾಗಿದೆ. ಇಂದು ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಈ ವೇಳೆ ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೂ ಸಂತಾಪ ಸೂಚಿಸಲಾಯಿತು.

  ತಮಿಳುನಾಡಿನಲ್ಲಿ ಕೂಡಾ ಕೊವಿಡ್‌ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ವಿಧಾನಮಂಡಲದ ಚಳಿಗಾಲದ ಅಧಿವೇಶನವನ್ನು ಮೂರು ದಿನಗಳಿಗೆ ಮಾತ್ರ ಸೀಮಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಅಗಲಿದ ಗಣ್ಯರಿಗೆ ಸಂತಾಪ ಸೂಚನೆಗೆ ಕಲಾಪ ಸೀಮಿತ ಮಾಡಲಾಯಿತು. ಸಿಎಂ ಎಂ.ಕೆ.ಸ್ಟಾಲಿನ್‌ ಅವರು ಪುನೀತ್‌ ರಾಜ್‌ಕುಮಾರ್‌ ಅವರಿಗೆ ಸಂತಾಪ ಸೂಚಿಸಿದರು. ಅವರ ಸಾಧನೆಯನ್ನು ಹಾಡಿ ಹೊಗಳಿದರು. ಇತರ ಜನಪ್ರತಿನಿಧಿಗಳು ಕೂಡಾ ಪುನೀತ್‌ ಅವರನ್ನು ಕೊಂಡಾಡಿದರು.

ಇನ್ನು ಇದೇ ವೇಳೆ ಹೆಲಿಕಾಪ್ಟರ್‌ ದುರಂತದಲ್ಲಿ ಸಾವನ್ನಪ್ಪಿದ ಸೇನಾ ಸಿಬ್ಬಂದಿ, ಮಾಜಿ ರಾಜ್ಯಪಾಲ ಕೆ.ರೋಸಯ್ಯ ಸೇರಿದಂತೆ ಹಲವು ಗಣ್ಯರಿಗೆ ಸಂತಾಪ ಸೂಚಿಸಲಾಯಿತು.

Share Post