CrimeNational

ನುಹ್‌ನಲ್ಲಿ ಮೆರವಣಿವೆ ವೇಳೆ ಗಲಭೆ; ನಾಲ್ವರು ದುರ್ಮರಣ

ಚಂಡೀಗಢ; ಮೆರವಣಿಗೆ ವೇಳೆ ನಡೆದ ಎರಡು ಗುಂಪುಗಳ ನಡುವಿನ ಜಗಳ ತಾರಕಕ್ಕೇರಿದೆ.  ಹಿಂಸಾಚಾರ ನಡೆದಿದ್ದು, ಘಟನೆಯಲ್ಲಿ ಇಬ್ಬರು ಗೃಹರಕ್ಷಕರು ಸಾವನ್ನಪ್ಪಿದ್ದಾರೆ. ಇದರ ಜೊತೆ ಇನ್ನಿಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೂವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.

ಗುರುಗ್ರಾಮ್‌ ಸಮೀಪವೇ ಇರುವ ಹರಿಯಾಣದ ನುಹ್‌ನಲ್ಲಿ ಈ ದುರ್ಘಟನೆ ನಡೆದಿದೆ. ನುಹ್‌ನ ಖೇಡ್ಲಾ ಮೋಡ್‌ನಲ್ಲಿ ಧಾರ್ಮಿಕ ಮೆರವಣಿ ವೇಳೆ ಗುಂಪೊಂದು ಕಲ್ಲು ತೂರಾಟ ನಡೆಸಿದೆ. ಇದರಿಂದಾಗಿ ಗಲಭೆ ನಡೆದಿದ್ದು ಈ ವೇಳೆ ಕಾರುಗಳಿಗೆ ಬೆಂಕಿ ಹಚ್ಚಲಾಗಿದೆ.

ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಬ್ರಿಜ್ ಮಂಡಲ್ ಜಲಾಭಿಷೇಕ ಯಾತ್ರೆಯನ್ನು ಗುರುಗ್ರಾಮ್-ಆಳ್ವಾರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಯುವಕರ ಗುಂಪೊಂದು ತಡೆದಿದ್ದು, ಈ ಹಿನ್ನೆಲೆಯಲ್ಲಿ ಗಲಭೆ ನಡೆದಿದೆ.

Share Post