National

ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ದರ್ಪ

ಮುಂಬೈ: ಒಂದು ಕಡೆ ಎಂಇಎಸ್‌ ಪುಂಡರು ಬೆಳಗಾವಿಯಲ್ಲಿ ತಮ್ಮ ಪುಂಡಾಟಿಕೆ ಮೆರೆದಿದ್ದಾರೆ. ಈ ಮೂಲಕ ಕುಂದಾನಗರಿಯಲ್ಲಿ ಶಾಂತಿ ಕದಡಿದ್ದಾರೆ. ಇನ್ನೊಂದೆಡೆ ಮಹಾರಾಷ್ಟ್ರದಲ್ಲಿ ಶಿವಸೇನೆ ಕಾರ್ಯಕರ್ತರು ಕನ್ನಡಿಗರ ಮೇಲೆ ದರ್ಪ ಮೆರೆಯುತ್ತಿದ್ದಾರೆ. ಕನ್ನಡಿಗರ ಕಾರುಗಳ ಮೇಲೆ ದಾಳಿ ಮಾಡಿ ಧ್ವಂಸಗೊಳಿಸಿದ್ದಾರೆ.

ಸಾಂಗ್ಲಿ ಜಿಲ್ಲೆಯ ಮೀರಜ್‌ ಪಟ್ಟಣದಲ್ಲಿ ಶಿವಸೇನೆ ಪುಂಡರ ಅಟ್ಟಹಾಸ ಮೆರೆದಿದ್ದಾರೆ. ಕರ್ನಾಟಕದ ಕಾರುಗಳ ಮೇಲೆ ದೊಣ್ಣೆಗಳಿಂದ ಹೊಡೆದು ಕಾರುಗಳ ಗಾಜುಗಳನ್ನು ಪುಡಿ ಮಾಡಿದ್ದಾರೆ. ಅಷ್ಟೇ ಅಲ್ಲ, ಕನ್ನಡಿಗರ ಮೇಲೆ ಹಲ್ಲೆ ಕೂಡಾ ಮಾಡಿದ್ದಾರೆ ಎಂದು ಗೊತ್ತಾಗಿದೆ.

ಇನ್ನೊಂದೆಡೆ ಸಾಂಗ್ಲಿ ಜಿಲ್ಲೆಯಲ್ಲಿ ಕರ್ನಾಟಕದ ಹಲವರು ಹೋಟೆಲ್‌ ಉದ್ಯಮಗಳನ್ನು ನಡೆಸುತ್ತಿದ್ದಾರೆ. ಅವುಗಳ ಮೇಲೆಯೂ ಶಿವಸೇನೆಯ ಕಣ್ಣು ಬಿದ್ದಿದೆ. ಇಂದು ಕನ್ನಡಿಗರ ಹಲವು ಹೋಟೆಲ್‌ಗಳನ್ನು ಶಿವಸೇನೆ ಕಾರ್ಯಕರ್ತರು ಮುಚ್ಚಿಸಿದ್ದಾರೆ.

 

Share Post