National

ಮಧ್ಯಪ್ರದೇಶದಲ್ಲಿ ಭೀಕರ ಬೆಂಕಿ ದುರಂತ; ಏಳು ಮಂದಿ ದುರ್ಮರಣ

ಇಂದೋರ್‌: ಮಧ್ಯಪ್ರದೇಶದಲ್ಲಿ ಭೀಕರ ಬೆಂಕಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಇಂದೋರ್‌ನ ವಿಜಯನಗರ ಪ್ರದೇಶದ ಎರಡು ಅಂತಸ್ತಿನ ವಸತಿ ಕಟ್ಟಡದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತರಲ್ಲಿ ಹಲವರು ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಬೆಂಕಿ ಆಕಸ್ಮಿಕದಲ್ಲಿ ಸುಟ್ಟು ಗಾಯಗಳಾಗಿದ್ದ 11 ಮಂದಿಯನ್ನು ರಕ್ಷಿಸಲಾಗಿದೆ. ಎಲೆಕ್ಟ್ರಿಕ್ ಮೀಟರ್‌ನಲ್ಲಿನ ಶಾರ್ಟ್ ಸರ್ಕ್ಯೂಟ್‌ ಆಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ. ವತಿ ಸಂಕೀರ್ಣದ ಪಾರ್ಕಿಂಗ್‌ನಲ್ಲಿದ್ದ ವಾಹನಗಳಿಗೂ ಬೆಂಕಿ ಆವರಿಸಿತ್ತು. ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಘಟನೆ ಕುರಿತಂತೆ ತನಿಖೆಗೆ ಆದೇಶಿಸಿರುವ ಅವರು, ನಿರ್ಲಕ್ಷ್ಯ ತೋರಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Share Post