National

ದೆಹಲಿಯಲ್ಲಿ ಭಾರಿ ಅಗ್ನಿ ದುರಂತ; ಏಳು ಮಂದಿ ಸಜೀವ ದಹನ..!

ನವದೆಹಲಿ: ದೆಹಲಿಯಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದ್ದು, ಏಳು ಮಂದಿ ಸಜೀವದಹನವಾಗಿದ್ದಾರೆ. ಇಲ್ಲಿ ಗೋಕಲ್‌ಪುರಿ ವಿಲೇಜ್‌ನಲ್ಲಿ 60ಕ್ಕೂ ಹೆಚ್ಚು ಗುಡಿಸಲುಗಳಿಗೆ ಬೆಳಗಿನ ಜಾವ ಬೆಂಕಿ ಬಿದ್ದಿದೆ. ಈಗಾಗಲೇ ಏಳು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸಾವಿನ ಪ್ರಮಾಣ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಗೋಕಲ್‌ಪುರಿಯ ಪಿಲ್ಲರ್ ನಂ 12ರ ಸಮೀಪ ಈ ಬೆಂಕಿ ದುರಂತ ಸಂಭವಿಸಿದೆ. ಬೆಳಗಿನ ಜಾವ 2 ಗಂಟೆ ಸುಮಾರಿಗೆ ಇದ್ದಕ್ಕಿದ್ದಂತೆ ಗುಡಿಸಲೊಂದಕ್ಕೆ ಬೆಂಕಿ ಬಿದ್ದಿದೆ. ಅಗ್ನಿಶಾಮಕ ಸಿಬ್ಬಂದಿ ಆಗಮಿಸುವ ವೇಳೆಗೆ ಬೆಂಕಿ ಸುಮಾರು 60ಕ್ಕೂ ಹೆಚ್ಚು ಗುಡಿಸಲುಗಳನ್ನು ಆವರಿಸಿದೆ. ಸದ್ಯ ಬೆಂಕಿ ನಿಯಂತ್ರಣಕ್ಕೆ ತರಲಾಗಿದೆ.

Share Post