CrimeNational

ಶಿವಸೇನೆ ನಾಯಕ ಸಂಜಯ್‌ ರಾವುತ್‌ಗೆ 4 ದಿನ ED ಕಸ್ಟಡಿ

ಮುಂಬೈ; ಭೂಹಗರಣವೊಂದರಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಶಿನಸೇವೆ ನಾಯಕ ಸಂಜಯ್‌ ರಾವುತ್‌ ಅವರನ್ನು ನಾಲ್ಕು ದಿನಗಳ ಕಾಲ ಇಡಿ ಕಸ್ಟಡಿಗೆ ವಹಿಸಲಾಗಿದೆ. ಮುಂಬೈ ಸೆಷನ್ಸ್‌ ಕೋರ್ಟ್‌ ಈ ಆದೇಶ ಹೊರಡಿಸಿದೆ.

ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಂಜಯ್‌ ರಾವುತ್‌ ಅವರಿಗೆ ಇಡಿ ಸಮನ್ಸ್‌ ಜಾರಿ ಮಾಡಿತ್ತು. ಆದ್ರೆ, ಸಂಜಯ್‌ ರಾವುತ್‌ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಕಳೆದ ರಾತ್ರಿ ಅವರನ್ನು ಬಂಧಿಸಲಾಗಿತ್ತು. ಇಂದು ಮಾಧ್ಯಹ್ನ ಸಂಜಯ್‌ ರಾವುತ್‌ ಅವರನ್ನು ಮುಂಬೈನ ಸೆಷನ್ಸ್‌ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಪ್ರಕರಣ ಸಂಬಂಧ ವಿಚಾರಣೆ ನಡೆಸಬೇಕಿರುವುದರಿಂದ ಅವರನ್ನು ಕಸ್ಟಡಿಗೆ ನೀಡುವಂತೆ ಕೋರ್ಟ್‌ಗೆ ಇಡಿ ಅಧಿಕಾರಿಗಳು ಮನವಿ ಮಾಡಿದರು. ಇದಕ್ಕೆ ಅಸ್ತು ಎಂದ ಕೋರ್ಟ್‌, ನಾಲ್ಕು ದಿನಗಳ ಕಾಲ ಸಂಜಯ್‌ ರಾವುತ್‌ರನ್ನು ಇಡಿ ಕಸ್ಟಡಿ ವಹಿಸಿ ಆದೇಶ ನೀಡಿತು.

Share Post