NationalPolitics

ರಾಜ್ಯಕ್ಕೆ ಆಗಮಿಸಲಿದ್ದಾರೆ ಸೋನಿಯಾ ಗಾಂಧಿ

ಬೆಂಗಳೂರು; ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್‌ ಸ್ಪರ್ಧೇ ಮಾಡಿದ್ದಾರೆ. ಇದರಲ್ಲಿ ಯಾರನ್ನು ಆಯ್ಕೆ ಮಾಡಬೇಕೆಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಸೋನಿಯಾಗಾಂಧಿ ಕೂಡಾ ಯಾರನ್ನು ಬೆಂಬಲಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಈ ಮಗನೊಂದಿಗೆ ಅವರು ಚರ್ಚೆ ನಡೆಸಲು ತೀರ್ಮಾನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತ್‌ ಜೋಡೋ ಯಾತ್ರೆ ನಡೆಸುತ್ತಿರುವ ರಾಹುಲ್‌ ಗಾಂಧಿಯನ್ನು ಭೇಟಿಯಾಗಲು ಸೋನಿಯಾ ಗಾಂಧಿಯವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. 

ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಎಐಸಿಸಿ ಅಧ್ಯಕ್ಷೀಯ ಚುನಾವಣೆ ಬಗ್ಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಇಂದು ಬೆಳಗ್ಗೆ ದೆಹಲಿಯಿಂದ ಹೊರಟು ಮೈಸೂರು ವಿಮಾನ ನಿಲ್ದಾಣಕ್ಕೆ ಸೋನಿಯಾ ಗಾಂಧಿ ಆಗಮಿಸಲಿದ್ದಾರೆ. ನಂತರ ಹೆಲಿಕಾಪ್ಟರ್‌ ಮೂಲಕ ಮಡಿಕೇರಿ ತಲುಪಲಿದ್ದಾರೆ. ನಂತರ ರಾಹುಲ್‌ ಗಾಂಧಿ ಜೊತೆ ಚುನಾವಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಸ್ಪರ್ಧಿಸಿದ್ದು, ಹೈಕಮಾಂಡ್ ಒಲವು ಮಾತ್ರ ಖರ್ಗೆ ಅವರ ಮೇಲಿದೆ. ಈ ಹಿನ್ನೆಲೆಯಲ್ಲಿ ಆ ಕುರಿತ ಮಹತ್ವದ ಚರ್ಚೆ ಮಡಿಕೇರಿಯ ರೆಸಾರ್ಟ್‌ನಲ್ಲಿ ನಡೆಯಲಿದೆ.

Share Post