NationalPolitics

ರಾಷ್ಟ್ರಪತಿ ಚುನಾವಣೆ; ಎನ್‌ಡಿಎ ಅಭ್ಯರ್ಥಿಗೆ ಬೆಂಬಲ ಘೋಷಿಸಿದ ಟಿಡಿಪಿ

ಅಮರಾವತಿ; ರಾಷ್ಟ್ರಪತಿ ಚುನಾವಣೆ ಹತ್ತಿರಕ್ಕೆ ಬರುತ್ತಿದೆ. ಎನ್‌ಡಿಎ ಮಿತ್ರಪಕ್ಷಗಳಲ್ಲದೇ ಇತರೆ ಪಕ್ಷಗಳು ಕೂಡಾ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬೆಂಬಲ ಘೋಷಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಆಂಧ್ರಪ್ರದೇಶದ ಆಡಳಿತಾರೂಢ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷ ಮುರ್ಮು ಅವರಿಗೆ ಬೆಂಬಲ ಘೋಷಿಸಿತ್ತು. ಇದೀಗ ವಿರೋಧ ಪಕ್ಷ ಟಿಡಿಪಿ ಕೂಡಾ ಮುರ್ಮು ಅವರಿಗೇ ಬೆಂಬಲ ನೀಡಿದೆ.

ಟಿಡಿಪಿ ಮುಖ್ಯಸ್ಥ ಎನ್‌.ಚಂದ್ರಬಾಬು ನಾಯ್ಡು ಅವರು ಪಕ್ಷದ ನೀತಿ ನಿರೂಪಣಾ ಸಮಿತಿ ಸಭೆಯಲ್ಲಿ ಈ ಘೋಷಣೆ ಮಾಡಿದ್ದಾರೆ. ಟಿಡಿಪಿ ಯಾವಾಗಲೂ ಸಾಮಾಜಿಕ ನ್ಯಾಯದ ಪರ ನಿಲ್ಲುತ್ತದೆ. ಈ ಹಿಂದೆ ಕೆ.ಆರ್‌.ನಾರಾಯಣನ್‌ ಮತ್ತು ಎ.ಪಿ.ಜೆ.ಅಬ್ದುಲ್‌ ಕಲಾಂ ಅವರಿಗೆ ಬೆಂಬಲ ನೀಡಿತ್ತು. ಅದೇ ರೀತಿ ಈ ಬಾರಿ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಸ್ಪರ್ಧಿಸಿರುವ ಆದಿವಾಸಿ ಮಹಿಳೆ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲಿದೆ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಟಿಡಿಪಿ ರಾಜ್ಯಸಭೆಯಲ್ಲಿ ಒಂದು ಸ್ಥಾನ, ಲೋಕಸಭೆಯಲ್ಲಿ 3 ಸ್ಥಾನ ಹೊಂದಿದೆ. ಇನ್ನು ಆಂಧ್ರ ಪ್ರದೇಶ ವಿಧಾನಸಭೆಯಲ್ಲಿ 23 ಸದಸ್ಯರ ಬಲ ಹೊಂದಿದೆ.

Share Post