National

ಪ್ರಜ್ವಲ್‌ ರೇವಣ್ಣಗೆ ತಾತ್ಕಾಲಿಕ ರಿಲೀಫ್‌; ಅಸಿಂಧು ಆದೇಶಕ್ಕೆ ಮಧ್ಯಂತರ ತಡೆ

ನವದೆಹಲಿ; ಚುನಾವಣೆ ಸಮಯದಲ್ಲಿ ಆಸ್ತಿ ವಿವರವನ್ನು ಮುಚ್ಚಿಟ್ಟ ಕಾರಣಕ್ಕೆ ಸಂಸದ ಪ್ರಜ್ವಲ್‌ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ರಾಜ್ಯ ಹೈಕೋರ್ಟ್‌ ಆದೇಶ ಹೊರಡಿಸಿತ್ತು. ಆದ್ರೆ ಇದಕ್ಕೆ ಸುಪ್ರೀಂ ಕೋರ್ಟ್‌ ಮಧ್ಯಂತರ ತಡೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ.

ಕರ್ನಾಟಕ ಹೈಕೋರ್ಟ್‌ ನೀಡಿದ ಆದೇಶವನ್ನು ಪ್ರಶ್ನೆ ಮಾಡಿ ಪ್ರಜ್ವಲ್‌ ರೇವಣ್ಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಹೈಕೋರ್ಟ್‌ ಆದೇಶಕ್ಕೆ ತಡೆ ನೀಡುವಂತೆ ಕೋರಿದ್ದಾರೆ. ಇದರ ವಿಚಾರಣೆ ನಡೆಸಿದ ಕೋರ್ಟ್‌, ಹೈಕೋರ್ಟ್‌ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. ಆದ್ರೆ ಇದು ತಾತ್ಕಾಲಿಕ ರಿಲೀಫ್‌ ಅಷ್ಟೇ. ಅಂತಿಮ ಆದೇಶ ಬರುವವರೆಗೂ ಪ್ರಜ್ವಲ್‌ ರೇವಣ್ಣಗೆ ಕಾನೂನು ಸಂಕಟ ಇದ್ದೇ ಇದೆ.

 

Share Post