National

ಶ್ರೀನಗರದಲ್ಲಿ ಭಾರತೀಯ ಸೇನೆ ಕಾರ್ಯಾಚರಣೆ; ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಭಾರತೀಯ ಸೇನೆ ನಡೆಸಿದ ಎನ್‌ಕೌಂಟರ್ ನಲ್ಲಿ ಲಷ್ಕರ್ ಇ ತೋಯ್ಬಾದ ಅಂಗ ಸಂಸ್ಥೆ ಟಿಆರ್​ಎಫ್​​ನ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಶ್ರೀನಗರದ ಜಕುರಾ ಪ್ರದೇಶದಲ್ಲಿ ಇಂದು ಬೆಳಗ್ಗೆ ಈ ಕಾರ್ಯಾಚರಣೆ ನಡೆದಿದೆ.

ಕಟ್ಟಡವೊಂದರಲ್ಲಿ ಉಗ್ರರು ಅಡಗಿದ್ದರು. ಈ ವೇಳೆ ದಾಳಿ ಮಾಡಲಾಗಿದೆ. ಹತ್ಯೆಗೀಡಾದವರಲ್ಲಿ ಇಬ್ಬನ ಹೆಸರು ಇಖ್ಲಾಕ್ ಹಜಂ ಎಂದು ಗುರುತಿಸಲಾಗಿದೆ. ಈತ ಇತ್ತೀಚೆಗೆ ಅನಂತ್‌ನಾಗ್‌ನ ಹಸನ್‌ಪೋರಾದಲ್ಲಿ ನಡೆದ ಹೆಡ್​ಕಾನ್ಸ್​ಟೇಬಲ್​​​ ಅಲಿ ಮೊಹಮ್ಮದ್ ಹತ್ಯೆಯಲ್ಲಿ ಇಖ್ಲಾಕ್ ಭಾಗಿಯಾಗಿನೆಂದು ಗೊತ್ತಾಗಿದೆ.  ಕಾರ್ಯಾಚರಣೆಯ ಸ್ಥಳದಿಂದ ಎರಡು ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ.

Share Post