CrimeNational

ಕಾರು ಪಲ್ಟಿ; ಒಂದೇ ಕುಟುಂಬದ 7 ಮಂದಿ ದುರ್ಮರಣ!

ತೆಲಂಗಾಣ; ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ.. ವೇಗವಾಗಿ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.. ಇದರಿಂದಾಗಿ ಒಂದೇ ಕುಟುಂಬದ ಏಳು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ..
ಮೃತರೆಲ್ಲರೂ ತೆಲಂಗಾಣದ ಮೇದಕ್‌ ಜಿಲ್ಲೆ ಭೀಮ್ಲಾ ತಾಂಡಾದ ನಿವಾಸಿಗಳು ಎಂದು ತಿಳಿದುಬಂದಿದೆ.. ಕುಟುಂಬದವರೆಲ್ಲಾ ಕಾರಿನಲ್ಲಿ ತೂಪ್ರಾಣಕ್ಕೆ ಹೋಗಿದ್ದರು.. ಅಲ್ಲಿಂದ ವಾಪಸ್ಸಾಗುವಾಗ ಈ ದುರಂತ ನಡೆದಿದೆ.. ರಸ್ತೆ ಬದಿ ನೀರು ತುಂಬಿದ್ದ ಹೊಂಡ ಇತ್ತು.. ಕಾರು ಚಾಲಕನ ನಿಯಂತ್ರಣ ತಪ್ಪಿ ನೀರಿನ ಹೊಂಡಕ್ಕೆ ಬಿದ್ದಿದೆ.. ಇದರಿಂದಾಗಿ ಒಂದೇ ಕುಟುಂಬದ ಏಳು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.. ಮಕ್ಕಳು, ಮಹಿಳೆಯರು ಸೇರಿ ಇಡೀ ಕುಟುಂಬ ಪ್ರಾಣ ತೆತ್ತಿದೆ..
ಶಿವಂಪೇಟೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.. ತೆಲಂಗಾಣ ಸಿಎಂ ರೇವಂತ್‌ ರೆಡ್ಡಿಯವರು ಸಂತಾಪ ಸೂಚಿಸಿದ್ದು, ಅಗತ್ಯ ನೆರವು ನೀಡೋದಾಗಿ ಘೋಷಣೆ ಮಾಡಿದ್ದಾರೆ..

Share Post