NationalPolitics

ಅಕ್ಕಿ ಪೂರೈಕೆ ವಿಚಾರ; ಅಮಿತ್‌ ಶಾ ಪೂರಕವಾಗಿ ಸ್ಪಂದಿಸಿದ್ದಾರೆ – ಸಿಎಂ ಸಿದ್ದರಾಮಯ್ಯ

ನವದೆಹಲಿ; ಕೇಂದ್ರದಿಂದ ಅಕ್ಕಿ ಪೂರೈಕೆ ಮಾಡೋದಿಲ್ಲ ಎಂದು ಹೇಳಿದ್ದರಿಂದ ರಾಜ್ಯದಲ್ಲಿ ಸಮಸ್ಯೆ ಆಗಿದೆ. ಬಡವರಿಗೆ ನೀಡುವ ಅಕ್ಕಿ ನೀಡುವ ವಿಚಾರದಲ್ಲೂ ರಾಜಕೀಯ ಮಾಡಬೇಡಿ ಎಂದು ಅಮಿತ್‌ ಶಾ ಅವರಿಗೆ ಹೇಳಿದ್ದೇವೆ. ನಮ್ಮ ಮನವಿಗೆ ಅವರು ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿ ಮಾಡಿದ ನಂತರ ಅವರು ಮಾತನಾಡಿದರು.

ನಿನ್ನೆ ನಾನು ಅಮಿತ್‌ ಶಾ ಅವರನ್ನು ಭೇಟಿ ಮಾಡಿದ್ದೆ. ಸೌಹಾರ್ದಯುತವಾಗಿ ಅವರೊಂದಿಗೆ ಚರ್ಚೆ ಮಾಡಿದ್ದೇನೆ. ಇದೇ ವೇಳೆ ರಾಜ್ಯಕ್ಕೆ ಅಕ್ಕಿ ನೀಡುವ ವಿಚಾರವಾಗಿಯೂ ಮಾತನಾಡಿದ್ದೇನೆ. ಅಕ್ಕಿ ನೀಡುವಂತೆ ಸೂಚಿಸಲು ಶಾ ಅವರಲ್ಲಿ ಮನವಿ ಮಾಡಿದ್ದೇನೆ. ಅದಕ್ಕೆ ಅವರು ಪೂರಕವಾಗಿ ಸ್ಪಂದಿಸಿದ್ದು, ಆಹಾರ ಸಚಿವ ಪಿಯೂಷ್ ಗೊಯೇಲ್ ಜೊತೆಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ ಎಂದರು.

ಇದೇ ವೇಳೆ ಜುಲೈ 1ರಂದು ಅನ್ನಭಾಗ್ಯ ಯೋಜನೆ ವಿಸ್ತರಣೆ ಮಾಡುವುದು ಅನುಮಾನ. ಅಕ್ಕಿ ಹೊಂದಿಸಲು ನಾವು ಶ್ರಮಿಸುತ್ತಿದ್ದೇವೆ. ಆಕ್ಕಿ ಪೂರೈಕೆಯಾಗುತ್ತಿದ್ದಂತೆ ಬಡವರಿಗೆ ಪೂರೈಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಇದೇ ವೇಳೆ ಹೇಳಿದ್ದಾರೆ.

Share Post