NationalPolitics

3 ವರ್ಷದಿಂದ ಪಕ್ಷ ಸಂಘಟನೆ ಮಾಡಿದವರಿಗೆ ಟಿಕೆಟ್‌; ಡಿ.ಕೆ.ಶಿವಕುಮಾರ್‌

ನವದೆಹಲಿ; ಗೆಲ್ಲುವ ಅವಕಾಶವಿರುವ ಯುವ ನಾಯಕರು ಹಾಗೂ ಮಹಿಳೆಯರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಕಾಂಗ್ರೆಸ್‌ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಿದ ಡಿ.ಕೆ.ಶಿವಕುಮಾರ್‌, ಮಾಧ್ಯಮಗಳ ಜೊತೆ ಮಾತನಾಡಿದರು.

ಕ್ಷೇತ್ರಗಳಲ್ಲಿ ಯಾರೆಲ್ಲಾ ಅಭ್ಯರ್ಥಿಗಳು ಸಂಘಟನೆಗಾಗಿ ಶ್ರಮಿಸಿದ್ದಾರೆ ಅನ್ನೋದು ನಮಗೆ ಗೊತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿಗಳು ಕೆಲಸ ಮಾಡಿದ್ದಾರೆ. ಪಕ್ಷ ಸಂಘಟನೆ ಮಾಡಿದ್ದಾರೆ ಅನ್ನೋ ಮಾಹಿತಿಯನ್ನು ಪಡೆದಿದ್ದೇವೆ. ಅದರ ಆಧಾರದ ಮೇಲೆ ಟಿಕೆಟ್‌ ಫೈನಲ್‌ ಮಾಡಲಾಗುತ್ತದೆ. ಈಗಾಗಲೇ ಐದಾರು ಬಾರಿ ಸಭೆ ನಡೆಸಿ ಪಟ್ಟಿ ಸಿದ್ಧಪಡಿಸುವ ಚರ್ಚೆ ಮಾಡಿದ್ದೇವೆ. ಮಧ್ಯಾಹ್ನ ಮೂರು ಗಂಟೆಗೆ ಕಾಂಗ್ರೆಸ್‌ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಅಂತಿಮ ಚರ್ಚೆ ನಡೆಯಲಿದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.

ಇನ್ನು ಹಾಲಿ ಇರುವ ಕಾಂಗ್ರೆಸ್‌ ಶಾಸಕರೆಲ್ಲಾ ಉತ್ತಮ ಕೆಲಸ ಮಾಡಿದ್ದಾರೆ. ಬಹುತೇಕ ಹಾಲಿ ಶಾಸಕರಿಗೆ ಈ ಬಾರಿ ಟಿಕೆಟ್‌ ಸಿಗಲಿದೆ ಎಂದೂ ಡಿ.ಕೆ.ಶಿವಕುಮಾರ್‌ ಇದೇ ವೇಳೆ ತಿಳಿಸಿದರು.

Share Post