National

ಕಂದಕಕ್ಕೆ ಉರುಳಿಬಿದ್ದ ವಾಹನ; ಹತ್ತು ಯಾತ್ರಿಗಳು ದಾರುಣ ಸಾವು

ಪಿಲಿಭಿತ್; ವಾನಹವೊಂದು ರಸ್ತೆ ಪಕ್ಕದ ಕಂದಕಕ್ಕೆ ಉರುಳಿ ಬಿದ್ದಿದ್ದು, ಇಬ್ಬರು ಮಕ್ಕಳು ಸೇರಿ ಹತ್ತು ಯಾತ್ರಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಗಜ್‌ರೌಲಾದಲ್ಲಿ ನಡೆದಿದೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ.

ವಾಹನದಲ್ಲಿದ್ದವರು ಹರಿದ್ವಾರದಿಂದ ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಕಡೆಗೆ ಹೋಗುತ್ತಿದ್ದರು. ಅಪಘಾತಕ್ಕೀಡಾದ ವಾಹನದಲ್ಲಿ 17 ಯಾತ್ರಾರ್ಥಿಗಳಿದ್ದರೆಂದು ತಿಳಿದುಬಂದಿದೆ. ಚಾಲಕ ನಿದ್ರೆಯ ಮಂಪರಿನಲ್ಲಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆಗೆ ಸಂತಾಪ ಸೂಚಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

Share Post