NationalPolitics

ಸಂಪುಟ ವಿಸ್ತರಣೆ ಸರ್ಕಸ್;‌ ದೆಹಲಿಯಲ್ಲಿ ಬಿಸಿಬಿಸಿ ಚರ್ಚೆ

ಬೆಂಗಳೂರು;  ದೆಹಲ್ಲಿ ಸಂಪುಟ ವಿಸ್ತರಣೆ ಸರ್ಕಸ್‌ ನಡೆಯತ್ತಿದೆ. ವೇಣುಗೋಪಾಲ್‌ ನಿವಾಸದಲ್ಲಿ ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ಇಂದು ಸಂಜೆ ವೇಳೆಗೆ ಎರಡನೇ ಪಟ್ಟಿ ರೆಡಿಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಬಿರುಸಿನ ಚರ್ಚೆಗಳು ನಡೆಯುತ್ತಿವೆ.

ಸಿದ್ದರಾಮಯ್ಯ ಅವರು ಒಂದು ಪಟ್ಟಿ ಇಟ್ಟುಕೊಂಡಿದ್ದರೆ, ಡಿ.ಕೆ.ಶಿವಕುಮಾರ್‌ ಅವರು ಕೂಡಾ ಒಂದು ಪಟ್ಟಿ ಇದೆ. ಇಬ್ಬರೂ ತಮ್ಮ ಬೆಂಬಲಿಗರಿಗೆ ಸಚಿವ ಸ್ಥಾನ ಕೊಡಿಸಲು ಸರ್ಕಸ್‌ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್‌ಗೆ ಮತ್ತೆ ತಲೆಬಿಸಿ ಶುರುವಾಗಿದೆ.

ಇನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯದವರೇ ಆಗಿರುವುದರಿಂದ, ರಾಜ್ಯದ ಪರಿಸ್ಥಿತಿ ಗೊತ್ತಿದೆ. ಹೀಗಾಗಿ ಲೋಕಾಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಟ್ಟಿ ಸಿದ್ಧಪಡಿಸುವ ಸಾಧ್ಯತೆ ಇದೆ.

ಅಂದುಕೊಂಡಂತೆ ಆದರೆ ಶನಿವಾರ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ.

Share Post