NationalPolitics

ಜಾತಿ ಜನಗಣತಿ ವರದಿ ಬಂದ ಮೇಲೆ ಪ್ರಕಟಿಸುತ್ತೇವೆ; ಸಿಎಂ ಸಿದ್ದರಾಮಯ್ಯ

ನವದೆಹಲಿ; ಬಿಹಾರದಲ್ಲಿ ಜಾತಿ ಜನಗಣತಿ ಪ್ರಕಟಿಸಿದ ಮೇಲೆ ಇತರ ರಾಜ್ಯಗಳಲ್ಲೂ ಜಕಾತಿ ಜನಗಣತಿ ಪ್ರಕಟಣೆ ಮಾಡುವಂತೆ ಒತ್ತಡಗಳು ಬರುತ್ತಿವೆ. ಈ ಬೆನ್ನಲ್ಲೇ ಕಾಂಗ್ರೆಸ್‌ ಇಂದು ದೆಹಲಿಯಲ್ಲಿ ಕಾರ್ಯಕಾರಿಣಿ ಸಭೆ ನಡೆಸಿದೆ. ಈ ಸಭೆಯಲ್ಲಿ ಕಾಂಗ್ರೆಸ್‌ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಜಾತಿ ಜನಗಣತಿ ವರದಿ ಜಾರಿ ಮಾಡೋದಕ್ಕೆ ತೀರ್ಮಾನ ಮಾಡಿದೆ. ಇನ್ನು ಸಭೆಯಲ್ಲಿ ಪಾಲ್ಗೊಂಡಿದ್ದ ಸಿಎಂ ಸಿದ್ದರಾಮಯ್ಯ ಅವರು ಕೂಡಾ ಕರ್ನಾಟಕದಲ್ಲಿ ಜಾತಿ ಜನಗಣತಿ ಪ್ರಕಟಿಸುತ್ತೇವೆ ಎಂದು ಹೇಳಿದ್ದಾರೆ.

ಎಐಸಿಸಿ ಕಚೇರಿಯಲ್ಲಿ ಸಭೆಯ ನಂತರ ಮಾತನಾಡಿದ ಅವರು, ನಾವು ಈ ಹಿಂದೆ ಅಧಿಕಾರದಲ್ಲಿದ್ದಾಗ ಜಾತಿ ಗಣತಿ ಸಮೀಕ್ಷೆ ಮಾಡಿಸಿದ್ದೆವು. ಆದ್ರೆ ನಮ್ಮ ಅವಧಿ ಮುಗಿಯುವುದರೊಳಗೆ ಅದರ ವರದಿ ನಮ್ಮ ಕೈಗೆ ಸಿಗಲಿಲ್ಲ. ನಂತರ ಸಮ್ಮಿಶ್ರ ಸರ್ಕಾರ ಬಂತು. ಹೆಚ್ಡಿಕೆ ಸಿಎಂ ಆದರು. ಈ ವೇಳೆ ಅವರು ಜಾತಿ ಗಣತಿ ಸಮೀಕ್ಷಾ ವರದಿಯನ್ನು ಸ್ವೀಕಾರ ಮಾಡಲಿಲ್ಲ. ಈ ಜಾತಿ ಗಣತಿ ವರದಿಯನ್ನು ನೀಡುವಂತೆ ಜಯಪ್ರಕಾಶ್‌ ಹೆಗ್ಡಯವರಿಗೆ ಸೂಚನೆ ಕೊಟ್ಟಿದ್ದೇವೆ. ವರದಿ ನಮ್ಮ ಕೈಸೇರಿದ ತಕ್ಷಣ ಜಾತಿ ಗಣತಿ ವರದಿ ಬಿಡುಗಡೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Share Post