NationalPolitics

ದ್ರೌಪದಿ ಮುರ್ಮುಗೆ ಬೆಂಬಲ ಸೂಚಿಸಿದ ವೈಎಸ್‌ಆರ್‌ಸಿಪಿ ಮುಖ್ಯಸ್ಥ ಜಗನ್‌

ಅಮರಾವತಿ; ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರಿಗೆ ಬೇರೆ ಬೇರೆ ಪಕ್ಷಗಳಿಂದ ಬೆಂಬಲ ವ್ಯಕ್ತವಾಗುತ್ತಿದೆ. ಹೀಗಾಗಿ ಅವರ ಗೆಲುವಿನ ಹಾದಿ ಸುಲಭವಾಗುತ್ತಾ ಹೊರಟಿಸಿದೆ. ಆಂಧ್ರಪ್ರದೇಶದಲ್ಲಿ ಅಧಿಕಾರದಲ್ಲಿರುವ ವೈಎಸ್‌ಆರ್‌ ಕಾಂಗ್ರೆಸ್‌ ಪಾರ್ಟಿ ಯಾರಿಗೆ ಬೆಂಬಲ ನೀಡುತ್ತೆ ಎಂಬ ಕುತೂಹಲವಿತ್ತು. ಆದ್ರೆ ಆಂಧ್ರ ಸಿಎಂ ಜಗನ್‌ ಮೋಹನ್‌ ರೆಡ್ಡಿ ಇಂದು ತಮ್ಮ ಪಕ್ಷದ ಬೆಂಬಲವನ್ನು ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಎಂದು ಘೋಷಣೆ ಮಾಡಿದ್ದಾರೆ.

ಬುಡಕಟ್ಟು ಜನಾಂಗದ ಮಹಿಳೆಯನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದು ಪಕ್ಷಕ್ಕೆ ಹರ್ಷ ತಂದಿದೆ ಎಂದು ಜಗನ್‌ ಹೇಳಿದ್ದಾರೆ.  ಮುಖ್ಯಮಂತ್ರಿ ವೈಎಸ್ ಜಗನ್ ಅವರು ಎಸ್‌ಸಿ, ಎಸ್‌ಟಿ ಮತ್ತು ಬಿಸಿಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಅದರ ಭಾಗವಾಗಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ ಎಂದು ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷ ಅಧಿಕೃತ ಹೇಳಿಕೆ ನೀಡಿದೆ.

ದ್ರೌಪದಿ ಮುರ್ಮು ಇಂದು ನಾಮಿನೇಷನ್‌ ಹಾಕಲಿದ್ದಾರೆ. ಕಾರ್ಯಕ್ರಮದಲ್ಲಿ ವೈಎಸ್‌ಆರ್‌ಸಿಪಿ ಸಂಸದೀಯ ವ್ಯವಹಾರಗಳ ನಾಯಕ, ರಾಜ್ಯಸಭಾ ಸದಸ್ಯ ವಿಜಯಸಾಯಿ ರೆಡ್ಡಿ ಮತ್ತು ಸಂಸದ ಮಿಥುನ್ ರೆಡ್ಡಿ ಭಾಗವಹಿಸಲಿದ್ದಾರೆ.

Share Post