CrimeNational

ಅಯೋಧ್ಯೆಯಲ್ಲಿ ಮೂವರು ಅನುಮಾನಾಸ್ಪದ ವ್ಯಕ್ತಿಗಳ ವಿಚಾರಣೆ

ಇದೇ ತಿಂಗಳ 22ರಂದು ಅಯೋಧ್ಯೆ ರಾಮಮಂದಿರದಲ್ಲಿ ರಾಮನ ಪ್ರಾಣ ಪ್ರತಿಷ್ಠೆ ನಡೆಯಲಿರುವ ಹಿನ್ನೆಲೆಯಲ್ಲಿ ಗುಪ್ತಚರ ದಳಗಳು ಉತ್ತರ ಪ್ರದೇಶದಾದ್ಯಂತ ಕ್ಷೇತ್ರ ಮಟ್ಟದಲ್ಲಿ ನಿಗಾ ಇಟ್ಟಿವೆ. ಈ ಹಿನ್ನಲೆಯಲ್ಲಿ ಶಂಕಿತ ಉಗ್ರರು ಅಯೋಧ್ಯೆಯಲ್ಲಿ ಸಾಮಾನ್ಯ ಜನರ ವೇಷದಲ್ಲಿ ಓಡಾಡುತ್ತಿದ್ದಾರೆ ಎಂಬುದು ಗುಪ್ತಚರ ದಳಗಳ ಮಾಹಿತಿ. ಪೊಲೀಸರು ಕೆಲವು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆದರೆ, ಬಂಧಿತರನ್ನು ವಿಚಾರಣೆಗೆ ಒಳಪಡಿಸಿದಾಗ ಅವರಿಗೆ ಯಾವುದೇ ಭಯೋತ್ಪಾದಕ ಸಂಘಟನೆಗಳ ಜತೆ ಸಂಪರ್ಕವಿರಲಿಲ್ಲ ಎಂದು ತಿಳಿದುಬಂದಿದೆ.

Share Post