Politics

ಕಾಂಗ್ರೆಸ್‌ನ ಕೆಲ ನಾಯಕರು ನನಗೆ ಸಹಕರಿಸಿದ್ದಾರೆ; ಹೆಚ್‌.ಡಿ.ಕುಮಾರಸ್ವಾಮಿ

ಮಂಡ್ಯ; ಕಾಂಗ್ರೆಸ್‌ನ ಕೆಲ ನಾಯಕರು ಹಾಗೂ ಕಾರ್ಯಕರ್ತರು ನನಗೆ ಸಹಕರಿಸಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಮಂಡ್ಯ ಜೆಡಿಎಸ್‌ ಅಭ್ಯರ್ಥಿ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.. ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕು ಕೆ.ಹೊನಲಗೆರೆಯಲ್ಲಿ ಮಾತನಾಡಿರುವ ಅವರು, ಮಂಡ್ಯ ಜನರು ನನಗೆ ಸಂಪೂರ್ಣವಾಗಿ ಬೆಂಬಲ ಕೊಟ್ಟಿದ್ದಾರೆ.. ನನ್ನ ಗೆಲುವಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ಎಂದು ಹೇಳಿದ್ದಾರೆ.. ಫಲಿತಾಂಶಕ್ಕೆ ಮೊದಲೇ ಕುಮಾರಸ್ವಾಮಿಯವರು ಗೆಲುವು ಖಚಿತ ಎಂಬ ರೀತಿಯಲ್ಲೇ ಮಾತನಾಡಿದ್ದಾರೆ..

ಮಂಡ್ಯದ ಜನ ಅತ್ಯಂತ ಉತ್ಸಾಹದಿಂದ ಮತ ಚಲಾವಣೆ ಮಾಡುತ್ತಿದ್ದಾರೆ.. ರಾಜ್ಯದಲ್ಲೇ ಅತ್ಯಧಿಕ ಮತಗಳಿಂದ ನಾನು ಗೆಲ್ಲುವ ವಿಶ್ವಾಸ ಇದೆ ಎಂದೂ ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ.. ಚುನಾವಣೆ ಸಮಯದಲ್ಲಿ ಅಪಪ್ರಚಾರಗಳು ನಡೆಯುತ್ತವೆ.. ಆದ್ರೆ ಮಂಡ್ಯದ ಜನರೆಲ್ಲರೂ ನನಗೆ ಸಹಕಾರ ನೀಡಿದ್ದಾರೆ.. ಸುಮಲತಾ ಅವರೂ ನನಗೆ ಮತ ಕೊಟ್ಟಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ..

 

Share Post