Politics

ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ರೋಡ್ ಶೋ!?

ಮಂಡ್ಯ: ಸಂಸದೆ ಸುಮಲತಾ ಅವರು ಇತ್ತೀಚೆಗೆ ತಮ್ಮ‌ ನಿರ್ಧಾರ ಪ್ರಕಟಿಸಲು ಮಂಡ್ಯದಲ್ಲಿ ಸಭೆ ಕರೆದಿದ್ದರು. ಈ ಸಭೆಯಲ್ಲಿ ನಟ ದರ್ಶನ್ ಕೂಡಾ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ್ದ ದರ್ಶನ್, ಸುಮಲತಾ ಅವರು ನನ್ನ ಅಮ್ಮ ಇದ್ದಂತೆ.. ಅವರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೋ ಅದಕ್ಕೆ ಬದ್ಧ ಎಂದಿದ್ದರು. ಇದೀಗ ಸುಮಲತಾ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಆದ್ರೆ ಮಂಡ್ಯ ಅಭ್ಯರ್ಥಿ ಪರ ಇನ್ನೂ ಪ್ರಚಾರದಲ್ಲಿ ಕಾಣಿಸಿಕೊಂಡಿಲ್ಲ. ಹೀಗಿರುವಾಗಲೇ ದರ್ಶನ್ ಅವರು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ.

  ಮಾಹಿತಿಗಳ ಪ್ರಕಾರ ದರ್ಶನ್ ಅವರು, ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರ ನಡೆಸಲಿದ್ದಾರಂತೆ.. ಇವತ್ತೇ ದರ್ಶನ್ ಅವರು, ಮಳವಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರೋಡ್ ಶೋ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

 

  ಕಳೆದ ಚುನಾವಣೆಯಲ್ಲಿ ಸುಮಲತಾ ಪರವಾಗಿ ದರ್ಶನ್ ಅವರು ಹಳ್ಳಿ ಹಳ್ಳಿ ಸುತ್ತಿ ಪ್ರಚಾರ ಮಾಡಿದ್ದರು. ಈ ಬಾರಿ ಕುಮಾರಸ್ವಾಮಿಗೆ ಸೋಲುಣಿಸಲು ಕಾಂಗ್ರೆಸ್ ಪಕ್ಷ ದರ್ಶನ್ ಅವರನ್ನು ಕರೆತರುತ್ತಿದೆ ಎಂದು ಹೇಳಲಾಗುತ್ತಿದೆ.

ಇನ್ನು, ಇಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆವರೆಗೂ ಮಳವಳ್ಳಿ ಕ್ಷೇತ್ರದಲ್ಲಿ ನಟ ದರ್ಶನ್ ರೋಡ್ ಶೋ ನಡೆಸಲಿದ್ದಾರಂತೆ. ಹಲಗೂರು, ಹಾಡ್ಲಿ‌ ಸರ್ಕಲ್, ಮಳವಳ್ಳಿ ಟೌನ್, ಬೆಳಕವಾಡಿ, ಬಿ.ಜಿ.ಪುರ, ಪೂರಿಗಾಲಿ, ಕಿರುಗಾವಲು, ಟಿ.ಕಾಗೇಪುರ ಸೇರಿದಂತೆ ಹಲವು ಹಳ್ಳಿಗಳಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

 

Share Post