Politics

ಡಿ.ಕೆ.ಶಿವಕುಮಾರ್‌ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲು..!

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ಇತರ 63 ಮಂದಿಯ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ. ಕೊವಿಡ್‌ ನಿಯಮಗಳನ್ನು ಉಲ್ಲಂಘನೆ ಮಾಡಿ ಪಾದಯಾತ್ರೆ ಮಾಡುತ್ತಿರುವ ಹಿನ್ನೆಲೆಯಲ್ಲಿ ರಾಮನಗರ ಪೊಲೀಸ್‌ ಠಾಣೆಯಲ್ಲಿ ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯು ಸೇರಿದಂತೆ 63 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.
    ನಾಲ್ಕು ದಿನಗಳಿಂದ ಕಾಂಗ್ರೆಸ್‌ ನಾಯಕರು ಪಾದಯಾತ್ರೆ ನಡೆಸುತ್ತಿದ್ದಾರೆ. ಇದ್ರಲ್ಲಿ ಕೊವಿಡ್‌ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ಕೇಸ್‌ ದಾಖಲಿಸಲಾಗಿದೆ. ನಾಲ್ಕು ದಿನಗಳಲ್ಲಿ ಕಾಂಗ್ರೆಸ್‌ ನಾಯಕರ ವಿರುದ್ಧ ದಾಖಲಾದ ಮೂರನೇ ಎಫ್‌ಐಆರ್‌ ಇದು.
    ಮೊದಲ ದಿನ ಸಂಗಮದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತ ಕಾಪಾಡಿಸಿಕೊಳ್ಳದ್ದು, ಮಾಸ್ಕ್‌ ಧರಿಸದೇ ಇದ್ದದ್ದು ಸೇರಿದಂತೆ ಹಲವು ಕೊವಿಡ್‌ ನಿಯಮಗಳನ್ನು ಉಲ್ಲಂಘಿಸಲಾಗಿತ್ತು. ಈ ಸಂಬಂಧ ಕೇಸ್‌ ದಾಖಲಿಸಲಾಗಿತ್ತು.
    ನಂತರ ಎರಡನೆಯದಾಗಿ ಅಧಿಕಾರಿಗಳು ಕೊವಿಡ್‌ ಪರೀಕ್ಷೆ ಮಾಡಲು ಬಂದಾಗ ಅದನ್ನು ಡಿ.ಕೆ.ಶಿವಕುಮಾರ್‌ ಸೇರಿದಂತೆ ಹಲವು ನಾಯಕರು ನಿರಾಕರಿಸಿದ್ದರು. ಈ ವೇಳೆ ಕೂಡಾ ಎಫ್‌ಐಆರ್‌ ದಾಖಲಿಸಲಾಗಿತ್ತು. ಇದೀಗ ಮತ್ತೆ ಮೂರನೇ ಎಫ್‌ಐಆರ್‌ ದಾಖಲಿಸಲಾಗಿದೆ.
Share Post