DistrictsPolitics

ಅಥಣಿ ಟಿಕೆಟ್‌ ಸಿಗದ ಹಿನ್ನೆಲೆ; ಬಿಜೆಪಿಗೆ ಗುಡ್‌ಬೈ ಹೇಳಲು ಸವದಿ ತೀರ್ಮಾನ

ಬೆಳಗಾವಿ; ಅಥಣಿ ಕ್ಷೇತ್ರದಿಂದ ಟಿಕೆಟ್‌ ಸಿಗದಿದ್ದಕ್ಕೆ ಬೇಸತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿಯವರು ಬಿಜೆಪಿಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಇಂದು ಅಥಣಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಮಹೇಶ್‌ ಕುಮಟಳ್ಳಿಗೆ ಟಿಕೆಟ್‌ ನೀಡಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. 

ಭಿಕ್ಷೆ ಪಾತ್ರೆ ಇಟ್ಟುಕೊಂಡು ತಿರುಗುವವನು ನಾನಲ್ಲ. ನಾನು ಸ್ವಾಭಿಮಾನ, ಲಜ್ಜೆಗೆಟ್ಟ ರಾಜಕಾರಣಿ ನಾನಲ್ಲ ಎಂದು ಹೇಳುವ ಮೂಲಕ ರಮೇಶ್‌ ಜಾರಕಿಹೊಳಿಗೆ ಸವದಿ ಟಾಂಗ್‌ ಕೊಟ್ಟಿದ್ದಾರೆ. ಬಿಜೆಪಿ ಪಕ್ಷವನ್ನು ನಾನು ತಾಯಿಯಂತೆ ಭಾವಿಸಿದ್ದೆ. ಆದ್ರೆ  ಟಿಕೆಟ್‌ ನೀಡದ ಹೈಕಮಾಂಡ್‌ ನಿರ್ಧಾರದಿಂದ ನೋವಾಗಿದೆ ಎಂದು ಸವದಿ ಇದೇ ವೇಳೆ ಹೇಳಿದ್ದಾರೆ.

ಬೊಮ್ಮಾಯಿಯವರ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿರುವ ಸವದಿಯವರು, ಬೊಮ್ಮಾಯಿಗೆ ಎರಡನೇ ಬಾರಿ ಸಿಎಂ ಆಗುವ ಸೌಭ್ಯಾಗ್ಯವಿಲ್ಲ ಎಂದಿದ್ದಾರೆ. ನನ್ನ ಕ್ಷೇತ್ರದ ಜನರೇ ನನಗೆ ಹೈಕಮಾಂಡ್‌. ಜನರ ತೀರ್ಮಾನದಂತೆ ನಾನು ನಡೆಯುತ್ತೇನೆ. ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಡಲು ತೀರ್ಮಾನ ಮಾಡಿದ್ದೇನೆ. ನಾಳೆ ಸಂಜೆಯೊಳಗೆ ನಾನು ಗಟ್ಟಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

 

 

 

 

 

 

Share Post