Politics

ರಾಜ್ಯದಲ್ಲಿ ಯಡಿಯೂರಪ್ಪ ಹವಾ ಮುಗಿದಿದೆ; ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ಸದಾ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಮುಗಿಬೀಳುಬ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಈಗ ಮತ್ತೊಮ್ಮೆ ಯಡಿಯೂರಪ್ಪ ಅವರ ಬಗ್ಗೆ ಮಾತನಾಡಿದ್ದಾರೆ. ರಾಜ್ಯದಲ್ಲಿ ಯಡಿಯೂರಪ್ಪ ಅವರ ಹವಾ ಮುಗಿದಿದೆ. ಇನ್ನೂ ಮೂರು-ನಾಲ್ಕು ಜನ ಇದ್ದಾರೆ. ಅವರ ಹವಾ ಕೂಡಾ ಮುಗಿಯಲಿದೆ ಎಂದು ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿರುವ ಅವರು, ನಾನು ಸಿಎಂ ಬದಲಾವಣೆ ಬಗ್ಗೆ ಮಾತನಾಡಿಲ್ಲ. ಎರಡನೇ ನಾಯಕತ್ವದ ಬಗ್ಗೆ ಮಾತ್ರ ಮಾತನಾಡಿದ್ದೇನೆ. ಪಕ್ಷಕ್ಕೆ ಎರಡನೇ ನಾಯಕತ್ವ ಬೇಕಾಗಿದೆ. ಪಕ್ಷದ ವರಿಷ್ಠರು ಮುಂದಿನ ಚುನಾವಣೆಗೆ ಒಳ್ಳೆಯ ಟೀಂ ರಚನೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ವಾಜಪೇಯಿ ನಂತರ ಮೋದಿ ಬಂದ ರೀತಿಯಲ್ಲಿ ರಾಜ್ಯದಲ್ಲೂ ಬದಲಾವಣೆಯಾಗಬೇಕಿದೆ. ಆಗ ಮಾತ್ರ ರಾಜ್ಯದಲ್ಲಿ ಪಕ್ಷ ಅಧಿಕಾರದಲ್ಲಿ ಉಳಿಯಲು ಸಾಧ್ಯ. ಈ ನಿಟ್ಟಿನಲ್ಲಿ ವರಿಷ್ಠರು ತೀರ್ಮಾನ ಕೈಗೊಳ್ಳಬೇಕು ಎಂದು ಬಸನಗೌಡ ಪಾಟೀಲ್‌ ಯತ್ನಾಳ್‌ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

Share Post