NationalPolitics

ಬಿಜೆಪಿಯ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿಗೆ ʻಭಾರತ ರತ್ನʼ ಗೌರವ

ನವದೆಹಲಿ; ಮಾಜಿ ಉಪಪ್ರಧಾನಿ ಹಾಗೂ ಬಿಜೆಪಿಯ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿಯವರಿಗೆ ಭಾರತ ರತ್ನ ಗೌರವ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಈ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ.

ಲಾಲ್‌ ಕೃಷ್ಣ ಅಡ್ವಾಣಿ ಎಂದೇ ಖ್ಯಾತರಾಗಿದ್ದ ಎಲ್‌.ಕೆ.ಅಡ್ವಾಣಿಯವರು ರಾಮಮಂದಿರಕ್ಕಾಗಿ ರಥಯಾತ್ರೆಗಳನ್ನು ಮಾಡಿದ್ದರು. ಬಿಜೆಪಿ ಪಕ್ಷದ ಸಂಸ್ಥಾಪಕರಲ್ಲಿ ಇವರೂ ಕೂಡಾ ಒಬ್ಬರು.  ಆರ್‌ಎಸ್‌ಎಸ್‌ನಲ್ಲೂ ಗುರುತಿಸಿಕೊಂಡಿದ್ದ ಎಲ್‌.ಕೆ.ಅಡ್ವಾಣಿಯವರು ದೀರ್ಘಕಾಲ ಲೋಕಸಭೆಯ ಪ್ರತಿಪಕ್ಷದ ನಾಯಕರಾಗಿದ್ದರು.

ಅವರ ಹೋರಾಟ ಹಾಗೂ ದೇಶಕ್ಕಾಗಿ ಅವರ ಸೇವೆಯನ್ನು ಗುರುತಿಸಿ ಅಡ್ವಾಣಿಯವರಿಗೆ ಭಾರತ ರತ್ನ ಗೌರವವನ್ನು ನೀಡಲಾಗಿದೆ. ಶೀಘ್ರದಲ್ಲೇ ಈ ಗೌರವವನ್ನ ಅವರಿಗೆ ಪ್ರದಾನ ಮಾಡಲಾಗುತ್ತದೆ.

Share Post