CrimePolitics

ರಾಷ್ಟ್ರಭಕ್ತರು, ನಾಡಧ್ವಜಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಬಿಜೆಪಿ ಆರೋಪ

ಬೆಂಗಳೂರು: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನವರ ಪ್ರತಿಮೆ ಮತ್ತು ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದು, ಮಹಾರಾಷ್ಟ್ರದಲ್ಲಿ ಕರ್ನಾಟಕ ಬಾವುಟಕ್ಕೆ ಬೆಂಕಿ ಇಟ್ಟಿದ್ದು ಇದೆಲ್ಲ ಎಂಇಎಸ್‌ ಜೊತೆ ಸೇರಿ ಕಾಂಗ್ರೆಸ್‌ ಮಾಡ್ತಿರುವ ಕುತಂತ್ರ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ. ಮಹಾರಾಷ್ಟ್ರದ ಎಂಇಎಸ್‌ ಪುಂಡರೊಂದಿಗೆ ಸೇರಿಕೊಂಡು ಕಾಂಗ್ರೆಸ್‌ ಕಾರ್ಯಕರ್ತರು ಈ ರೀತಿ ಅವಹೇಳನ ಕಾರ್ಯಗಳನ್ನು ಮಾಡುತ್ತಿದ್ದಾರೆಂದು ಕಿಡಿ ಕಾರಿದೆ. ಕರ್ನಾಟಕದಲ್ಲಿ ಶಾಂತಿ ಕದಡುವುದೇ ನಾಡದ್ರೋಹಿ ಕಾಂಗ್ರೆಸ್‌ ಉದ್ದೇಶ ಎಂದು ಟ್ವೀಟ್‌ ಮಾಡಿ ರಾಜ್ಯ ಬಿಜೆಪಿ ಘಟಕ ಆಕ್ರೋಶ ವ್ಯಕ್ತಪಡಿಸಿದೆ. ಕನ್ನಡ ಭಾಷೆ ಮತ್ತು ಭಾವನೆಗಳ ನಡುವೆ ಕಿಡಿ ಹಚ್ಚಿ ನಿಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಬೇಡಿ ಎಂದು ಎಚ್ಚರಿಕೆ ನೀಡಿದೆ.

Share Post