Politics

ಬಿಜೆಪಿ ಅಭ್ಯರ್ಥಿಗಳ ಘೋಷಣೆ; ಚಿಕ್ಕಬಳ್ಳಾಪುರಕ್ಕೆ ಸುಧಾಕರ್

ಬೆಂಗಳೂರು; ಲೋಕಸಭಾ ಚುನಾವಣೆಗೆ ಬಿಜೆಪಿ ಐದನೇ ಪಟ್ಟಿ ರಿಲೀಸ್ ಮಾಡಲಾಗಿದೆ. ರಾಜ್ಯದಲ್ಲಿ ಉಳಿದ ಕ್ಷೇತ್ರಗಳಿಗೂ ಈ ಪಟ್ಟಿಯಲ್ಲಿ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.

ಚಿಕ್ಕಬಳ್ಳಾಪುರಕ್ಕೆ ಡಾ.ಕೆ.ಸುಧಾಕರ್ ಹಾಗೂ ಅಲೋಕ್ ವಿಶ್ವನಾಥ್ ನಡುವೆ ಬಿಗ್ ಫೈಟ್ ಇತ್ತು.. ಆದ್ರೆ ಹೈಕಮಾಂಡ್ ಡಾ.ಕೆ.ಸುಧಾಕರ್ ಗೆ ಟಿಕೆಟ್ ಪಕ್ಕಾ ಮಾಡಿದೆ.

ಇನ್ನು ಸ್ಥಳೀಯರ ವಿರೋಧದ ನಡುವೆಯೂ ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಟಿಕೆಟ್ ನೀಡಲಾಗಿದೆ. ರಾಯಚೂರು ಕ್ಷೇತ್ರಕ್ಕೆ ರಾಜಾ ಅಮರೇಶ್ವರ ನಾಯಕ್ ಗೆ ಟಿಕೆಟ್ ನೀಡಲಾಗಿದೆ. ಉತ್ತರ ಕನ್ನಡಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.

ಚಿತ್ರದುರ್ಗ ಕ್ಷೇತ್ರಕ್ಕೆ ಘೋಷಣೆ ಬಾಕಿ ಇದೆ.

Share Post