BengaluruPolitics

ಕಾಂಗ್ರೆಸ್‌ ಪ್ರತಿಭಟನೆಗಳಿಂದ ದಿಗ್ಬಂಧನ ಸ್ಥಿತಿ!; ರಾಜ್ಯಪಾಲರಿಂದ ರಾಷ್ಟ್ರಪತಿಗೆ ಮಾಹಿತಿ!

ಬೆಂಗಳೂರು; ಮುಡಾ ಹಗರಣ ವಿಚಾರದಲ್ಲಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ ನಡೆಸುತ್ತಿದೆ.. ಈ ಬೆನ್ನಲ್ಲೇ ರಾಜ್ಯಪಾಲರು ಈ ವಿಚಾರವನ್ನು ಕೇಂದ್ರ ಸರ್ಕಾರ ಹಾಗೂ ರಾಷ್ಟ್ರಪತಿಗೆ ಮುಟ್ಟಿಸಿದ್ದಾರೆ.. ಕಾಂಗ್ರೆಸ್‌ ಪ್ರತಿಭಟನೆಯಿಂದ ನಾನು ಸಾರ್ವಜನಿಕ ಸಮಾರಂಭಗಳಿಗೂ ಹಾಜರಾಗದಂತಹ ದಿಗ್ಬಂಧನ ಸ್ಥಿತಿ ನಿರ್ಮಾಣವಾಗಿದೆ ಎಂದು ರಾಜ್ಯಪಾಲರು ರಾಷ್ಟ್ರಪತಿ ಹಾಗೂ ಕೇಂದ್ರ ಗೃಹ ಸಚಿವಾಲಯಕ್ಕೆ ಮಾಹಿತಿ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ..
ಕಾಂಗ್ರೆಸ್‌ ಕಾರ್ಯಕರ್ತರು ಗೋಬ್ಯಾಕ್‌ ಗವರ್ನರ್‌ ಚಳವಳಿ ಶುರು ಮಾಡಿದ್ದಾರೆ.. ಈ ಮೂಲಕ ರಾಜಭವನದ ಮೇಲೆ ಒತ್ತಡ ಹೇರುವ ಪ್ರಯತ್ನ ನಡೆಯುತ್ತಿದೆ.. ಕಾಂಗ್ರೆಸ್‌ ನಾಯಕರಿಂದ ರಾಜಭವನಕ್ಕೆ‌ ನುಗ್ಗುವ ಬೆದರಿಕೆ ಇದೆ ಎಂದು ರಾಜ್ಯಪಾಲರು ವರದಿಯಲ್ಲಿ ಹೇಳಿದ್ದಾರೆ ಎನ್ನಲಾಗುತ್ತಿದೆ..

Share Post