Politics

Breaking; ಕಾಂಗ್ರೆಸ್ ಪಟ್ಟಿ ರಿಲೀಸ್; ಚಿಕ್ಕಬಳ್ಳಾಪುರಕ್ಕೆ ರಕ್ಷಾ ರಾಮಯ್ಯ

ಬೆಂಗಳೂರು; ರಾಜ್ಯದಲ್ಲಿ ನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿರಲಿಲ್ಲ ಇದರಲ್ಲಿ ಇಂದು ಮೂರು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

ಚಿಕ್ಕಬಳ್ಳಾಪುರಕ್ಕೆ ಎಂಎಸ್ ರಾಮಯ್ಯ ಮೊಮ್ಮಗ ರಕ್ಷಾ ರಾಮಯ್ಯಗೆ ಟಿಕೆಟ್ ನೀಡಲಾಗಿದೆ. ಚಾಮರಾಜನಗರಕ್ಕೆ ಸಚಿವ ಮಹದೇವಪ್ಪ ಪುತ್ರ ಸುನಿಲ್ ಬೋಸ್ ಟಿಕೆಟ್ ಪಡೆದಿದ್ದಾರೆ. ಬಳ್ಳಾರಿ ಕ್ಷೇತ್ರಕ್ಕೆ ಶಾಸಕ ತುಕಾರಾಂಗೆ ಟಿಕೆಟ್ ಕನ್ಫರ್ಮ್ ಮಾಡಲಾಗಿದೆ.

ಕೋಲಾರದಲ್ಲಿ ಟಿಕೆಟ್ ಗಾಗಿ ಜಟಾಪಟಿ ನಡೆಯುತ್ತಿದೆ. ಹೀಗಾಗಿ ಆ ಕ್ಷೇತ್ರಕ್ಕೆ ಇನ್ನೂ ಟಿಕೆಟ್ ಘೋಷಿಸಿಲ್ಲ. ಅಸಮಾಧಾನ ತಣಿಸಿ ಟಿಕೆಟ್ ಘೋಷಿಸುವ ಸಾದ್ಯತೆ ಇದೆ.

Share Post