Politics

ಬೆಳಗಾವಿ ಸೋಲಿನ ಬಗ್ಗೆ ತನಿಖೆ ನಡೆಯಲಿದೆ : ಬಿಎಸ್‌ವೈ

ಬೆಳಗಾವಿ : ವಿಧಾನ ಪರಿಷತ್‌ ಚುನಾವಣೆಯಲ್ಲಿ ಬೆಳಗಾವಿಯಲ್ಲಿ ಬಿಜೆಪಿ ಸೋಲು ಕಂಡಿದೆ. ಸೋಲಿಗೆ ಕಾರಣವೇನು ಎನ್ನುವುದರ ಬಗ್ಗೆ ಸಮಗ್ರವಾದ ತನಿಖೆ ನಡೆಯಲಿದೆ ಎಂದು ಬಿಎಸ್‌ವೈ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿಎಸ್‌ವೈ, ಮೈಸೂರು ಮತ್ತು ಬೆಳಗಾವಿಯಲ್ಲಿ ಗೆದ್ದೇ ಗೆಲ್ತೀವಿ ಎಂಬ ನಿರೀಕ್ಷೆ ಇತ್ತು. ಈ ಸೋಲಿ ಅನಿರೀಕ್ಷಿತವಾಗಿದೆ. ಇದರ ಬಗ್ಗೆ ಚರ್ಚಿಸಿ ತನಿಖೆ ನಡೆಸಲಾಗುತ್ತೆ ಎಂದು ಹೇಳಿಕೆ ನೀಡಿದ್ದಾರೆ.

ರಮೇಶ್ ಜಾರಕಿಹೊಳಿ ಅವರ ತಮ್ಮ ಲಖನ್ ಜಾರಕಿಹೊಳಿ ಪಕ್ಷಾಂತರವಾಗಿ ನಿಲ್ಲಿಸಿರುವುದರ ಬಗ್ಗೆಯೂ ಸಿಎಂ ಅವರೇ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ. ಸಿಎಂ ಅವರ ತೀರ್ಮಾನವೇ ಅಂತಿಮ ಎಂದು ಹೇಳಿದರು.

Share Post