CrimePolitics

ದರ್ಶನ್‌ ಬೇರೆ ಜೈಲಿಗೆ ಶಿಫ್ಟ್‌ ಮಾಡಲು ಸಿಎಂ ಸೂಚನೆ; ತುಮಕೂರಿಗೆ ಹೋಗ್ತಾರಾ ಚಾಲೆಂಜಿಂಗ್‌ ಸ್ಟಾರ್‌..?

ಬೆಂಗಳೂರು; ಪರಪ್ಪನ ಅಗ್ರಹಾರದ ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್‌ಗೆ ರಾಜಾತಿಥ್ಯ ನೀಡಲಾಗುತ್ತಿದೆ. ಅದಕ್ಕೆ ಸಾಕ್ಷಿಯಾಗಿ ಹಲವು ಫೋಟೋಗಳು, ವಿಡಿಯೋಗಳು ಬಹಿರಂಗವಾಗಿವೆ.. ಈ ವಿಚಾರ ತಿಳಿಯುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ.. ಕೂಡಲೇ ದರ್ಶನ್‌ರನ್ನು ಬೇರೆ ಜೈಲಿಗೆ ಶಿಫ್ಟಗ್‌ ಮಾಡುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ; ಚನ್ನಪಟ್ಟಣಕ್ಕೆ ಯಾರು..?; ಟಿಕೆಟ್‌ ಯೋಗೇಶ್ವರ್‌ಗಾ..? ನಿಖಿಲ್‌ ಕುಮಾರಸ್ವಾಮಿಗಾ..?

ಡಿಜಿಐಜಿಪಿ ಅಲೋಕ್‌ ಮೋಹನ್‌ ಅವರಿಗೆ ಸೂಚನೆ ಕೊಟ್ಟಿರುವ ಸಿಎಂ ಸಿದ್ದರಾಮಯ್ಯ, ದರ್ಶನ್‌ ಹಾಗೂ ಇತರ ಆರೋಪಿಗಳನ್ನು ಬೇರೆ ಬೇರೆ ಜೈಲುಗಳಿಗೆ ಶಿಫ್ಟ್‌ ಮಾಡುವಂತೆ ಸೂಚನೆ ಕೊಟ್ಟಿದ್ದಾರೆ.. ಜೊತೆಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿದ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ಕೊಡುವಂತೆಯೂ ಸೂಚನೆ ಕೊಟ್ಟಿದ್ದಾರೆ.. ಸಿಎಂ ಸೂಚನೆ ಹಿನ್ನೆಲೆಯಲ್ಲಿ ದರ್ಶನ್‌ ಅವರನ್ನು ತುಮಕೂರು ಅಥವಾ ಬೇರೆ ಯಾವುದಾದರೂ ಜೈಲಿಗೆ ಶಿಫ್ಟ್‌ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ..

ಇದನ್ನೂ ಓದಿ; ದೇಶಕ್ಕೆ ಹೊಸ ಪ್ರಧಾನಿ ಬರ್ತಾರಾ..?; ಹೊಸ ಚರ್ಚೆ ಹುಟ್ಟುಹಾಕ್ತಿರೋದು ಯಾಕೆ..?

ಇನ್ನು ಪ್ರಕರಣ ಸಂಬಂದ ಈಗಾಗಲೇ ಏಳು ಜೈಲು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.. ಜೊತೆಗೆ ತನಿಖೆಗೂ ಆದೇಶ ನೀಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ..

Share Post