Politics

ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರ ಎತ್ತಿಸಿದ್ದೇ ಸಿಎಂ ಸಿದ್ದರಾಮಯ್ಯ; ವಿಜಯೇಂದ್ರ

ಬೆಂಗಳೂರು; ಸಿಎಂ ಸಿದ್ದರಾಮಯ್ಯ ಅವರು ಜನರ ಸಮಸ್ಯೆಗಳ ಕಡೆಗೆ ಗಮನ ಹರಿಸಬೇಕಿತ್ತು.. ಆದ್ರೆ ಡಿ.ಕೆ.ಶಿವಕುಮಾರ್‌ ವಿರುದ್ಧ ಸಚಿವರನ್ನು ಎತ್ತಿಕಟ್ಟುತ್ತಿದ್ದಾರೆ.. ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರವನ್ನು ಮುನ್ನೆಲೆಗೆ ತರಿಸಿದ್ದೇ ಸಿಎಂ ಸಿದ್ದರಾಮಯ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪ ಮಾಡಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯ ಅವರು ಎಷ್ಟು ದಿನ ಸಿಎಂ ಆಗಿರುತ್ತಾರೋ ಗೊತ್ತಿಲ್ಲ.. ಅಷ್ಟರೊಳಗೆ ಅವರು ಜನರ ಸಮಸ್ಯೆ ಕೇಳಬೇಕು. ಅದು ಬಿಟ್ಟು ಉಡಾಫೆ ಮಾತನಾಡುತ್ತಾರೆ ಎಂದು ಲೇವಡಿ ಮಾಡಿದ್ದಾರೆ..

ರಾಜ್ಯ ಕಾಂಗ್ರೆಸ್‌ ಸರ್ಕಾರ ದಿನೇ ದಿನೇ ಜನರ ವಿಶ್ವಾಸ ಕಳೆದುಕೊಳ್ಳುತ್ತಿದೆ.. ಸಿಎಂ, ಡಿಸಿಎಂ ಹಾಗೂ ಸಚಿವರು ಹಾದಿ ಬೀದಿಯಲ್ಲಿ ಹೊಡೆದಾಟ ನಡೆಸಿದ್ದಾರೆ.. ರಾಜ್ಯದ ಅಭಿವೃದ್ಧಿ ಕಡೆಗಣಿಸಿರುವ ರಾಜ್ಯ ಸರ್ಕಾರದ ವಿರುದ್ಧ ನಾವು ಹೋರಾಟಗಳನ್ನು ಮತ್ತಷ್ಟು ತೀವ್ರಗೊಳಿಸುತ್ತೇವೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟಗಳನ್ನು ಮುಂದುವರೆಸುವುದರ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ ಎಂದು ವಿಜಯೇಂದ್ರ ಹೇಳಿದ್ದಾರೆ..

 

Share Post