Politics

ಕೆ ಎಸ್‌ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ – ಸಿದ್ಧರಾಮಯ್ಯ

ಬೆಂಗಳೂರು : ಸಚಿವ ಕೆ ಎಸ್‌ ಈಶ್ವರಪ್ಪನವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್‌ ನಾಯಕರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸುವುದಾಗಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಘೋಷಿಸಿದ್ದಾರೆ.

ವಿಧಾನಸಭೆಯಲ್ಲಿ ನಾವು ಅಹೋರಾತ್ರಿ ಪ್ರತಿಭಟನೆ ಮಾಡಲು ನಿರ್ಧರಿಸಿದ್ದೀವಿ. ಕೆ ಎಸ್‌ ಈಶ್ವರಪ್ಪ ವಿಚಾರಕ್ಕೆ ಒಂದು ಅಂತ್ಯ ನೀಡಬೇಕಿದೆ. ಹಗಲು ರಾತ್ರಿ ನಾವು ಪ್ರತಿಭಟನೆ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಮ್ಮ ರಾಷ್ಟ್ರ ಧ್ವಜಕ್ಕೆ ಕೆ ಎಸ್‌ ಈಶ್ವರಪ್ಪ ಅಗೌರವ ತೋರಿದ್ದಾರೆ. ಇದು ದೇಶದ್ರೋಹವೇ ಸರಿ ಎಂದು ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ. ನಮ್ಮೊಂದಿಗೆ ವಿಧಾನಪರಿಷತ್‌ ಸದಸ್ಯರು ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ಈಶ್ವರಪ್ಪನವರು ಆರ್‌ಎಸ್‌ಎಸ್‌ನ ಗುಪ್ತ ಅಜೆಂಡಾವನ್ನು ಹೊರಹಾಕಿದ್ದಾರೆ ಎಂದು ಸಿದ್ಧರಾಮಯ್ಯ ಈಶ್ವರಪ್ಪನವರ ವಿರುದ್ಧ ಗುಡುಗಿದ್ದಾರೆ.

Share Post