DistrictsPolitics

ಮಾಜಿ ಶಾಸಕನ ಬೆತ್ತಲೆ ಮೆರವಣಿಗೆ ಮಾಡ್ತಾರಂತೆ ಕಾಂಗ್ರೆಸ್‌ ಶಾಸಕ!

ಚಿಕ್ಕೋಡಿ(Chikkodi); ಕಾಗವಾಡದ ಕಾಂಗ್ರೆಸ್‌ ಶಾಸಕ ರಾಜು ಕಾಗೆ ಮಾಜಿ ಶಾಸಕ ಶ್ರೀಮಂತ ಪಾಟೀಲ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.. ನನ್ನ ತಂಟೆಗೆ ಬಂದರೆ ಬಟ್ಟೆ ಬಿಚ್ಚಿಸಿ ಬೆತ್ತಲೆ ಮೆರವಣಿಗೆ ಮಾಡಿಸುತ್ತೇನೆ ಎಂದು ಶಾಸಕ ರಾಜು ಕಾಗೆ ವಾಗ್ದಾಳಿ ಮಾಡಿದ್ದಾರೆ.. ಅವರ ಈ ಹೇಳಿಕೆ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.

ಇದನ್ನೂ ಓದಿ; ರೇಣುಕಾಸ್ವಾಮಿ ಕೊಲೆಯಲ್ಲಿ ಈ ಮೂವರು ಭಾಗಿಯೇ ಆಗಿಲ್ಲವಂತೆ!

ಕಾಗವಾಡ ತಾಲ್ಲೂಕಿನ ಐನಾಪುರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಮಾತನಾಡದ ಶಾಸಕರು, ಮಾಜಿ ಶಾಸಕ ಶ್ರೀಮಂತ ಪಾಟೀಲ್‌ ಅವರನ್ನು ಉದ್ದೇಶಿಸಿ ಏಕವಚನದಲ್ಲಿ ಮಾತನಾಡಿದರು.. ನಿನಗೆ ನನ್ನ ಬಗ್ಗೆ ಮಾತನಾಡುವ ಯೋಗ್ಯತೆಯೇ ಇಲ್ಲ.. ಒಂದು ವೇಳೆ ಮಾತನಾಡಿದರೆ ಬಟ್ಟೆ ಬಿಚ್ಚಿಸಿ ಮೆರವಣಿಗೆ ಮಾಡಿಸುತ್ತೇನೆ ಎಂದು ಧಮಕಿ ಹಾಕುವ ರೀತಿಯಲ್ಲಿ ಮಾತನಾಡಿದ್ದಾರೆ.
ರಾಜು ಕಾಗೆಯವರ ಈ ಭಾಷಣದ ತುಣಕು ಈಗ ಎಲ್ಲಡೆ ವೈರಲ್‌ ಆಗುತ್ತಿದ್ದು, ಜನರಿಂದ ಆಕ್ರೋಶಗಳು ವ್ಯಕ್ತವಾಗುತ್ತಿವೆ..
ಇದನ್ನೂ ಓದಿ; ಮದುವೆ ನಿಶ್ಚಯವಾಗಿದ್ದ ಯುವತಿ ಮೇಲೆ ಅತ್ಯಾಚಾರ!

Share Post