Politics

ಎರಡನೇ ದಿನದ ಪಾದಯಾತ್ರೆ ಶುರು; ಸಿದ್ದರಾಮಯ್ಯಗೆ ವಿಶ್ರಾಂತಿ

ರಾಮನಗರ: ಮೇಕೆದಾಟು ಯೋಜನೆಗಾಗಿ ನಡೆಯುತ್ತಿರುವ ಪಾದಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ದೊಡ್ಡ ಆಲನಹಳ್ಳಿಯಿಂದ ಪಾದಯಾತ್ರೆ ಶುರುವಾಗಿದ್ದು, ಇಂದು ಕನಕಪುರದವರೆಗೆ ಪಾದಯಾತ್ರೆ ಮಾಡಲಾಗುತ್ತದೆ.  ಆದರೆ ಇಂದಿನ ಪಾದಯಾತ್ರೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಗವಹಿಸುತ್ತಿಲ್ಲ. ನಿನ್ನೆ ಪಾದಯಾತ್ರೆ ವೇಳೆ ಸಿದ್ದರಾಮಯ್ಯ ಸುಸ್ತಾಗಿದ್ದರು. ಅವರಿಗೆ ಜ್ವರ ಕೂಡಾ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆಯ ಪಾದಯಾತ್ರೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಸಿದ್ದರಾಮಯ್ಯ, ಮನೆಗೆ ತೆರಳಿದ್ದರು.

ಚಿಕಿತ್ಸೆ ಪಡೆದಿರುವ ಸಿದ್ದರಾಮಯ್ಯ ಮನೆಯಲ್ಲಿಯೇ ಚೇತರಿಸಿಕೊಳ್ಳುತ್ತಿದ್ದಾರೆ. ಆದ್ರೆ ವೈದ್ಯರು ವಿಶ್ರಾಂತಿ ಪಡೆಯಬೇಕೆಂದು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯ ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಮನೆಯಲ್ಲಿದ್ದುಕೊಂಡೇ ಪಾದಯಾತ್ರೆಯ ವಿವರ ಪಡೆಯಲಿದ್ದಾರೆ. ಇಂದು ಅವರ ಆರೋಗ್ಯದಲ್ಲಿ ಚೇತರಿಕೆ ಕಂಡರೆ ನಾಳೆ ಕನಕಪುರದಿಂದ ಮುಂದುವರೆಯುವ ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

Share Post