NationalPolitics

ಕಾಂಗ್ರೆಸ್‌ನವರು ಜನ್ಮದಲ್ಲಿ ಬುದ್ಧಿ ಕಲಿಯಲ್ಲ; ಸಿದ್ದರಾಮಯ್ಯ ವಿರುದ್ಧ ಮೋದಿ ಕಿಡಿ!

ಹರಿಯಾಣ; ಮುಡಾ ಹಗರಣ ಈಗ ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.. ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಮುಡಾ ಹಗರಣವನ್ನು ಪ್ರಸ್ತಾಪ ಮಾಡಿದ್ದಾರೆ.. ಈ ಮೂಲಕ ಕಾಂಗ್ರೆಸ್‌ ಪಕ್ಷ ಹಾಗೂ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.. ಹರಿಯಾಣದಲ್ಲಿ ನಡೆಯುತ್ತಿರುವ ಪ್ರಚಾರದ ವೇಳೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಈ ಜನ್ಮದಲ್ಲಿ ಉದ್ಧಾರ ಆಗೋದಿಲ್ಲ, ಈ ಜನ್ಮದಲ್ಲಿ ಅವರು ಸುಧಾರಿಸೋದಿಲ್ಲ ಎಂದು ಹೇಳಿದ್ದಾರೆ..
ಕಾಂಗ್ರೆಸ್‌ ತನ್ನ ತಪ್ಪುಗಳನ್ನು ಎಂದಿಗೂ ತಿದ್ದಿಕೊಳ್ಳುವುದಿಲ್ಲ. ಹೀಗಾಗಿ ಅವರಿಗೆ ಯಾವ ಕಾರಣಕ್ಕೂ ಮತ್ತೊಂದು ಅವಕಾಶ ಕೊಡಬೇಡಿ ಎಂದು ಮೋದಿ ಹೇಳಿದ್ದಾರೆ.. ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ ಮಾಡಿರುವುದರಿಂದ ಬಿಜೆಪಿ ಪಕ್ಷ ಈ ವಿಚಾರವನ್ನು ತನ್ನ ಚುನಾವಣಾ ಪ್ರಚಾರದಲ್ಲಿ ಬಳಸಿಕೊಳ್ಳುತ್ತಿದೆ.. ಕರ್ನಾಟಕ ಸಿಎಂ ಸಿದ್ದರಾಮಯ್ಯ ವಿರುದ್ಧ ಜಮೀನು ಕಬಳಿಕೆ ಆರೋಪ ಇದೆ.. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಿದ್ದರಾಮಯ್ಯ ಅವರು ಹೈಕೋರ್ಟ್‌ ಮೊರೆ ಹೋಗಿದ್ದರು.. ಆದ್ರೆ ಕೋರ್ಟ್‌ ಅವರಿಗೆ ಚಾಟಿ ಬೀಸಿದೆ. ಆದರೂ ಕಾಂಗ್ರೆಸ್‌ನವರು ಚಾಳಿ ಬಿಡುವುದಿಲ್ಲ ಎಂದು ಮೋದಿ ವಾಗ್ದಾಳಿ ನಡೆಸಿದ್ದಾರೆ..

Share Post