NationalPolitics

ಲೋಕಸಭಾ ಚುನಾವಣೆ ಕಾಂಗ್ರೆಸ್‌ ಪ್ರಣಾಳಿಕಾ ಸಮಿತಿ ರಚನೆ; ಸಿದ್ದರಾಮಯ್ಯಗೆ ಸ್ಥಾನ

ನವದೆಹಲಿ; ಲೋಕಸಭಾ ಚುನಾವಣೆಗೆ ಎಲ್ಲಾ ಪಕ್ಷಗಳೂ ಈಗಾಗಲೇ ಸಿದ್ಧತೆಗಳು ಆರಂಭಿಸಿವೆ. ಕಾಂಗ್ರೆಸ್‌ ಪಕ್ಷ ಕೂಡಾ ಈ ಬಾರಿ ಬಿರುಸಿನಿಂದ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದರ ಭಾಗವಾಗಿ ಪಿ.ಚಿದಂಬರಂ ನೇತೃತ್ವದಲ್ಲಿ 16 ಮಂದಿಯ ಪ್ರಣಾಳಿಕಾ ಸಮಿತಿ ರಚನೆ ಮಾಡಲಾಗಿದೆ. ಈ ಸಮಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೂ ಸ್ಥಾನ ನೀಡಲಾಗಿದೆ.

ಛತ್ತೀಸ್‌ಗಢದ ಮಾಜಿ ಉಪಮುಖ್ಯಮಂತ್ರಿ ಟಿ.ಎಸ್. ಸಿಂಗ್‌ದೇವ್ ಅವರು ಲೋಕಸಭಾ ಚುನಾವಣಾ ಪ್ರಣಾಳಿಕೆ ಸಮಿತಿ ಸಂಚಾಲಕರಾಗಿದ್ದಾರೆ. ಸಿದ್ದರಾಮಯ್ಯ, ಪ್ರಿಯಾಂಕಾ ಗಾಂಧಿ, ಶಶಿ ತರೂರ್, ಜೈರಾಮ್ ರಮೇಶ್, ಆನಂದ್ ಶರ್ಮಾ, ರಂಜಿತ್ ರಂಜನ್, ಜಿಗ್ನೇಶ್ ಮೇವಾನಿ ಸೇರಿ 16 ನಾಯಕರು ಈ ಸಮಿತಿಯಲ್ಲಿದ್ದಾರೆ.

 

Share Post