BengaluruPolitics

ಸಂಜೆ ಪರಿಷತ್‌ ಸ್ಥಾನಕ್ಕೆ ಸಿ.ಪಿ.ಯೋಗೇಶ್ವರ್‌ ರಾಜೀನಾಮೆ; ಪಕ್ಷೇತರವಾಗಿ ಸ್ಪರ್ಧೆ!

ಬೆಂಗಳೂರು; ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ಬಯಸಿದ್ದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ನಿರಾಶರಾಗಿದ್ದಾರೆ.. ಈ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಸಿ.ಪಿ.ಯೋಗೇಶ್ವರ್‌ ಅವರು ಇಂದು ವಿಧಾನಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.. ಸಂಜೆ 4 ಗಂಟೆಗೆ ವಿಧಾನಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಅನಂತರ ಅವರು ಚನ್ನಪಟ್ಟಣ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ತೀರ್ಮಾನಿಸಿದ್ದಾರೆ..
ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಹುಬ್ಬಳ್ಳಿಯಲ್ಲಿದ್ದಾರೆ.. ಹೀಗಾಗಿ ಸಿ.ಪಿ.ಯೋಗೇಶ್ವರ್‌ ಅವರು ಹುಬ್ಬಳ್ಳಿಗೆ ಹೋಗುತ್ತಿದ್ದಾರೆ.. ಸಂಜೆ ಹೊರಟ್ಟಿಯವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಕೆ ಮಾಡಲಿದ್ದಾರೆ.. ಇದಕ್ಕೂ ಮೊದಲು ಮಾತನಾಡಿರುವ ಯೋಗೇಶ್ವರ್‌ ಅವರು, ನಾನು ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಬೇಕು ಎಂದಿದ್ದೆ.. ಬಿಜೆಪಿ ಚಿಹ್ನೆಯಡಿ ಸ್ಪರ್ಧೆ ಮಾಡಲು ಇಚ್ಛೆ ಇತ್ತು.. ಆದ್ರೆ ಜೆಡಿಎಸ್‌ನಿಂದ ಸ್ಪರ್ಧೆ ಮಾಡೋದು ನನಗೆ ಕಷ್ಟವಾಗುತ್ತದೆ.. ಹೀಗಾಗಿ ನಾನು ಪಕ್ಷೇತರವಾಗಿ ಸ್ಪರ್ಧೆ ಮಾಡುವ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ರಾಜೀನಾಮೆ ನೀಡಿದ ನಂತರ ನಾಳೆ ಈ ಬಗ್ಗೆ ತೀರ್ಮಾನ ಮಾಡತ್ತೇನೆ ಎಂದು ಯೋಗೇಶ್ವರ್‌ ಹೇಳಿದ್ದಾರೆ..

Share Post