CrimePolitics

ವಾಲ್ಮೀಕಿ ನಿಗಮದಲ್ಲಿ ಕೋಟಿ ಕೋಟಿ ಹಗರಣ; ಸಚಿವ ನಾಗೇಂದ್ರ ತಲೆದಂಡ!

ಬೆಂಗಳೂರು; ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ನೂರಕ್ಕೂ ಹೆಚ್ಚು ಕೋಟಿ ರೂಪಾಯಿ ಹಗರಣದ ಹಿನ್ನೆಲೆಯಲ್ಲಿ ಸಚಿವ ತಲೆದಂಡವಾಗಿದೆ… ಅವರೇ ಸ್ವಯಂ ಪ್ರೇರಣೆಯಿಂದ ರಾಜೀನಾಮೆ ಕೊಟ್ಟಿದ್ದಾರೆ.. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಮಾತನಾಡಿದ್ದು, ನಾಗೇಂದ್ರ ಅವರೇ ಸ್ವಯಂ ಪ್ರೇರಣೆಯಿಂದ ರಾಜೀನಾಮೆ ನೀಡಿದ್ದಾರೆ ಎಂದಿದ್ದಾರೆ.

ಅಕ್ರಮದಲ್ಲಿ ನಾಗೇಂದ್ರ ಅವರು ಭಾಗಿಯಾಗಿಲ್ಲ. ಹೀಗಾಗಿ ಅವರು ರಾಜೀನಾಮೆ ಕೊಡುವ ಅಗತ್ಯತೆ ಇರಲಿಲ್ಲ.. ಹೀಗಾಗಿ ನಾವು ರಾಜೀನಾಮೆ ಕೇಳಿರಲಿಲ್ಲ.. ಆದ್ರೆ ಅವರೇ ಸ್ವಯಂ ಪ್ರೇರಣೆಯಿಂದ ರಾಜೀನಾಮೆ ನೀಡಿದ್ದಾರೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ..

ಇನ್ನೊಂದೆಡೆ ಸಚಿವ ನಾಗೇಂದ್ರ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಮಾತುಕತೆ ನಡೆಸಿದರು.. ಅನಂತರ ಅವರು ರಾಜೀನಾಮೆ ನೀಡಿದ್ದಾರೆ..

 

Share Post