Politics

ಡಿಕೆಶಿ ವಶಿಷ್ಠರು ಅಲ್ಲ, ವಿಶ್ವಾಮಿತ್ರನೂ ಅಲ್ಲ – ಸಿಟಿ ರವಿ

ಬೆಂಗಳೂರು : ದೇವಾಲಯಗಳ ಸ್ವತಂತ್ರಗೊಳಿಸಿದರೆ ಸುಟ್ಟು ಭಸ್ಮವಾಗುತ್ತಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿದ ಸಿಟಿ ರವಿ, ʼ ಡಿಕೆ ಶಿವಕುಮಾರ್‌ ವಶಿಷ್ಠರು ಅಲ್ಲ, ವಿಶ್ವಾಮಿತ್ರನೂ ಅಲ್ಲ. ಅವರು ಅವರನ್ನೇನಾದರೂ ಭಸ್ಮಾಸುರ ಅಂದುಕೊಂಡಿದ್ರೆ ಹೇಗೆ ಕಾಂಗ್ರೆಸ್‌ ಮೇಲೆ ಕೈ ಹಿಡಿಸಬೇಕು ಎಂದು ನಮಗೆ ತಿಳಿದಿದೆ. ಡಿಕೆ ಶಿವಕುಮಾರ್‌ ಅವರೇ ಶಾಪಗ್ರಸ್ಥರು, ಬೇಲ್ ಮೇಲೆ ಹೊರಬಂದಿದ್ದಾರೆ. ಬೇಲ್ ಕ್ಯಾನ್ಸಲ್ ಆದರೆ ಜೈಲಿಗೆ ಹೋಗಬೇಕು. ದೇವಾಲಯ ಸಮಾಜದ ಸ್ವತ್ತು, ಅದನ್ನು ಸಮಾಜಕ್ಕೆ ವಾಪಸ್ ನೀಡುತ್ತೇನೆ ಎಂಬ ಸಿಎಂ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ.

ಬಿಜೆಪಿ ತರುವ ಎಲ್ಲಾ ಪರಿವರ್ತನೆಗಳನ್ನು ವಿರೋಧಿಸುವ ಕಾಂಗ್ರೆಸ್‌ ಚಾಳಿ ಅಪಾಯಕಾರಿಯಾದದ್ದು. ಕಾಲಕ್ಕೆ ತಕ್ಕಂತೆ ಬದಲಾಗಬೇಕೆಂಬ ಮನಸ್ಥಿತಿ ಕಾಂಗ್ರೆಸ್‍ಗೆ ಇಲ್ಲ, ಅದಕ್ಕೆ ಒಂದು ಕುಟುಂಬಕ್ಕೆ ಜೋತು ಬಿದ್ದಿದೆ ಎಂದು ಕಿಡಿಕಾರಿದ್ದಾರೆ. ಒಟ್ಟಾರೆ ಕಾಂಗ್ರೆಸ್ ತಾಲಿಬಾನ್‍ಗೂ ಸಹ ಕಾಂಪಿಟೇಶನ್ ಕೊಡುವ ರೀತಿ ವರ್ತಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

Share Post