NationalPolitics

ವಿಚಾರಣೆಗೆ ಹಾಜರಾದ ರಾಹುಲ್‌; ಡಿ.ಕೆ.ಸುರೇಶ್‌ರನ್ನು ನೂಕಾಡಿದ ಪೊಲೀಸರು

ನವದೆಹಲಿ; ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಇವತ್ತೂ ಕೂಡಾ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಎಐಸಿಸಿ ಕಚೇರಿಯಿಂದ ಪಾದಯಾತ್ರೆ ಮೂಲಕ ಅವರು ಇಡಿ ಕಚೇರಿಗೆ ತಲುಪಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ ಕಾಂಗ್ರೆಸ್‌ ನಾಯಕರು, ಕಾರ್ಯಕರ್ತರು ಪಾದಯಾತ್ರೆ ವೇಳೆ ಹೈಡ್ರಾಮಾ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸುವ ಸಲುವಾಗಿ ಪೊಲೀಸರು, ಡಿ.ಕೆ.ಸುರೇಶ್‌, ಕೆ.ಸಿ.ವೇಣುಗೋಪಾಲ್‌, ದಿನೇಶ್‌ ಗುಂಡೂರಾವ್‌ ಸೇರಿದಂತೆ ಹಲವು ನಾಯಕರನ್ನು ವಶಕ್ಕೆ ಪಡೆದಿದ್ದಾರೆ.

ರಾಹುಲ್‌ ಗಾಂಧಿ ವಿಚಾರಣೆಗೆ ಹಾಜರಾದ ಹಿನ್ನೆಲೆಯಲ್ಲಿ ಇವತ್ತೂ ಕೂಡಾ ನೂರಾರು ಕಾಂಗ್ರೆಸ್‌ ಕಾರ್ಯಕರ್ತರು ಎಐಸಿಸಿ ಕಚೇರಿ ಹಾಗೂ ಇಡಿ ಕಚೇರಿ ಬಳಿ ಸೇರಿದ್ದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ಕೂಡಾ ನಡೆದಿದೆ. ಇದೇ ವೇಳೆ ಸಂಸದ ಡಿ.ಕೆ.ಸುರೇಶ್‌ರನ್ನು ಪೊಲೀಸರು ತಳ್ಳಾಡಿದ ಘಟನೆ ನಡೆದಿದೆ. ಪೊಲೀಸರು ಹಲವರನ್ನು ವಶಕ್ಕೆ ತೆಗೆದುಕೊಂಡು ಪರಿಸ್ಥಿತಿ ನಿಯಂತ್ರಿಸುತ್ತಿದ್ದಾರೆ.

Share Post