CrimePolitics

ದೇವರಾಜೇಗೌಡ ತಲೆಕೆಟ್ಟವನು, ಆತನನ್ನು ಆಸ್ಪತ್ರೆಗೆ ಸೇರಿಸಬೇಕು; ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು; ವಕೀಲ ದೇವರಾಜೇಗೌಡ ತಲೆಕೆಟ್ಟವನು, ಆಸ್ಪತ್ರೆಗೆ ಸೇರಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.. ಅಶ್ಲೀಲ ವಿಡಿಯೋ ಪ್ರಕರಣದ ಹಿಂದೆ ಡಿ.ಕೆ.ಶಿವಕುಮಾರ್‌ ಇದ್ದಾರೆ.. ಕುಮಾರಸ್ವಾಮಿ ಹೆರು ಹಾಳು ಮಾಡಲು ಡಿ.ಕೆ.ಶಿವಕುಮಾರ್‌ ನನಗೆ 100 ಕೋಟಿ ರೂಪಾಯಿ ಆಫರ್‌ ಕೊಟ್ಟಿದ್ದರು ಎಂದು ದೇವರಾಜೇಗೌಡ ಆರೋಪ ಮಾಡಿದ್ದರು.. ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್‌, ದೇವರಾಜೇಗೌಡ ಏನು ಬೇಕಾದರೂ ಮಾತನಾಡಿಕೊಳ್ಳಲಿ, ಅವನು ನನ್ನ ಹೆಸರು ದುರುಪಯೋಗ ಮಾಡಿಕೊಳ್ಳುತ್ತಿದ್ದಾನೆ ಎಂದಿದ್ದಾರೆ..

ದೇವರಾಜೇಗೌಡ ಅನವಶ್ಯಕವಾಗಿ ನನ್ನ ಹೆಸರು ಹೇಳುತ್ತಿದ್ದಾನೆ. ಆದ್ರೆ ನಾನು ಆತನ ಜೊತೆ ಯಾವುದೇ ಮಾತುಕತೆ ನಡೆಸಿಲ್ಲ.. ನಾನು ತಪ್ಪು ಮಾಡಿಲ್ಲವಾದ್ದರಿಂದ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.. ಪಕ್ಷ ಎಂದ ಮೇಲೆ ಸಾವಿರಾರು ಜನ ಭೇಟಿಯಾಗಿ ಹೋಗುತ್ತಾರೆ. ಯಾವ ಹುತ್ತದಲ್ಲಿ ಯಾವ ಹಾವು ಇರುತ್ತೋ ಯಾರಿಗೆ ಗೊತ್ತು ಎಂದು ಇದೇ ವೇಳೆ ಡಿ.ಕೆ.ಶಿವಕುಮಾರ್‌ ಪ್ರಶ್ನೆ ಮಾಡಿದ್ದಾರೆ..

Share Post