Politics

ನಾಲ್ಕು ಸ್ಥಾನಗಳನ್ನು ಕಾಂಗ್ರೆಸ್ ಗೆ ಬಿಟ್ಟುಕೊಟ್ಟರಾ ದೇವೇಗೌಡರು..?

ಮೈಸೂರು; ಬಿಜೆಪಿಯವರು ಹಾಗೂ ಕುಮಾರಸ್ವಾಮಿಯವರು ರಾಜ್ಯದಲ್ಲಿ ಎನ್ ಡಿಎ 28 ಕ್ಕೆ 28 ಸೀಟೂ ಗೆಲ್ಲುತ್ತೇವೆ ಎಂದು ಹೇಳುತ್ತಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲೂ ಗೆಲ್ಲೋದಕ್ಕೆ ರಣತಂತ್ರ ರೂಪಿಸುತ್ತಿದ್ದಾರೆ. ಆದ್ರೆ ಮಾಜಿ ಪ್ರಧಾನಿ ದೇವೇಗೌಡರು ಮಾತ್ರ 28 ಕ್ಷೇತ್ರಗಳ ಪೈಕಿ 24 ಕ್ಷೇತ್ರಗಳು ಗೆಲ್ಲಬೇಕು ಎಂದಿದ್ದಾರೆ.

ಮೈಸೂರಿನಲ್ಲಿ ಮೋದಿ ನೇತೃತ್ವದ ಸಮಾವೇಶದಲ್ಲಿ ಮಾತನಾಡಿದ ದೇವೇಗೌಡರು, ಜೆಡಿಎಸ್ ಮೂರು ಕ್ಷೇತ್ರಗಳಿಗೆ ಸೀಮಿತವಾಗಿಲ್ಲ. ಯಡಿಯೂರಪ್ಪ ಎಲ್ಲಿಗೆ ಕರೆದರೂ ಬಂದು ಪ್ರಚಾರ ಮಾಡುತ್ತೇನೆ ಎಂದರು. ಇನ್ನು ಇದೇ ವೇಳೆ, ನಮ್ಮ ರಾಜ್ಯದಿಂದ 24 ಸೀಟು ಗೆಲ್ಲಿಸಿಕೊಟ್ಟು ಮೋದಿ ಕೈಬಲಪಡಿಸೋಣ ಎಂದರು.

Share Post