NationalPolitics

ದೆಹಲಿಗೆ ಆಗಮಿಸಿದ ಡಿಕೆಶಿ; ಕೆಲವೇ ಕ್ಷಣಗಳಲ್ಲಿ ಮೀಟಿಂಗ್

ಬೆಂಗಳೂರು; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ದೆಹಲಿಗೆ ಆಗಮಿಸಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಅವರು ಕೂಡಾ ದೆಹಲಿಯಲ್ಲಿದ್ದಾರೆ. ಕೆಲವೇ ಕ್ಷಣಗಳಲ್ಲಿ ಮೀಟಿಂಗ್‌ ನಡೆಯಲಿದ್ದು, ಏನಾಗುತ್ತದೆ ಎಂಬ ಕುತೂಹಲ ಉಂಟಾಗಿದೆ.

ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ನಡೆಯಲಿದ್ದು, ಇಬ್ಬರೂ ನಾಯಕರು ಕೆಲ ಹೊತ್ತಿನಲ್ಲೇ ಖರ್ಗೆ ನಿವಾಸಕ್ಕೆ ಆಗಮಿಸಲಿದ್ದಾರೆ. ಇನ್ನು ಇದೇ ವೇಳೆ ರಾಹುಲ್‌ ಗಾಂದು ಕೂಡಾ ಇರಲಿದ್ದಾರೆ ಎಂದು ತಿಳಿದುಬಂದಿದೆ.

ಇನ್ನೊಂದೆಡೆ ರಾಹುಲ್‌ ಗಾಂಧಿಯವರು ಸುರ್ಜೇವಾಲಾ ಜೊತೆ ಮಾತುಕತೆ ನಡೆಸಿದ್ದಾರೆ. ಇಂದು ಸಂಜೆಯೊಳಗೆ ಒಂದು ತೀರ್ಮಾನಕ್ಕೆ ಬರುವ ಸಾಧ್ಯತೆ ಇದೆ.

Share Post